Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವೆಂಬರ್ ಕ್ರಾಂತಿ ಕಾಂಗ್ರೆಸ್ ನಲ್ಲಿ ಮಾತ್ರವಲ್ಲ, ಬಿಜೆಪಿಯಲ್ಲೂ ಆಗುತ್ತೆ : ಮತ್ತೆ ಕ್ರಾಂತಿ ಕಿಡಿಹೊತ್ತಿಸಿದ ರಾಜಣ್ಣ

---Advertisement---

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಕ್ರಾಂತಿ ವಿಚಾರ ದೊಡ್ಡಮಟ್ಟಕ್ಕೆ ಸದ್ದು ಮಾಡಿತ್ತು. ಅದು ರಾಜಣ್ಣ ಕ್ರಾಂತಿ ವಿಚಾರ ತೆಗೆದ ಮೇಲೆನೆ. ಸೆಪ್ಟೆಂಬರ್ ಕ್ರಾಂತಿ, ನವೆಂಬರ್ ಕ್ರಾಂತಿ ಬಗ್ಗೆ ಮಾತನಾಡಿದ್ದರು. ಸೆಪ್ಟೆಂಬರ್ ಕ್ರಾಂತಿ ಅಂತು ಆಗ್ಲಿಲ್ಲ, ನವೆಂಬರ್ ಕ್ರಾಂತಿಯಾಗುತ್ತಾ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಇದೀಗ ರಾಜಣ್ಣ ಅದಕ್ಕೆ ಕ್ಲಾರಿಟಿ ಕೊಟ್ಟಿದ್ದಾರೆ.

ನವೆಂಬರ್ ಕ್ರಾಂತಿ ಅಂದ್ರೆ ಕಾಂಗ್ರೆಸ್ ನಲ್ಲಿ ಮಾತ್ರ ಅಂತ ಯಾಕೆ ತಿಳಿದುಕೊಳ್ಳುತ್ತೀರಾ..? ಬಿಜೆಪಿಯಲ್ಲೂ ಕ್ರಾಂತಿಯಾಗಬಹುದು. ಬಿಜೆಪಿಯವರ ವಿರುದ್ಧ ಎಷ್ಟು ಜನ ಇದ್ದಾರೆ. ವಿಜಯೇಂದ್ರ ಅವರನ್ನು ತೆಗೆಯಬೇಕು ಅಂತ ಒಂದು ದೊಡ್ಡ ಗುಂಪೆ ಇದೆ. ಈಗ ವಿಜಯೇಂದ್ರ ಅವರನ್ನ ತೆಗೆದ್ರೆ ಯಡಿಯೂರಪ್ಪ ಅವರು ಸುಮ್ನೆ ಇರ್ತಾರಾ..? ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ, ಜೆಡಿಎಸ್ ಗೆ ದೇವೇಗೌಡರು ಅನಿವಾರ್ಯ ಹಾಗೇ ಕಾಂಗ್ರೆಸ್ ಗೆ ಸಿದ್ದರಾಮಯ್ಯ ಅನಿವಾರ್ಯ. ಹೀಗಾಗಿ ನಾಯಕರು ಎಲ್ಲವನ್ನು ನೋಡಿಕೊಂಡು ಮಾಡಬೇಕು ಎಂದಿದ್ದಾರೆ.

ಇದೇ ವೇಳೆ ಸಿಎಂ ಸ್ಥಾನದ ಬಗ್ಗೆ ಮಾತನಾಡಿ, ಎಲ್ಲವನ್ನು ಎಐಸಿಸಿ ತೀರ್ಮಾನ ಮಾಡಬೇಕು. ಯಾರನ್ನಾದರೂ ಒಬ್ಬರನ್ನ ನೇಮಿಸಿ, ಎಂಎಲ್ಎ ಗಳಿಂದ ಅಭಿಪ್ರಾಯ ಸಂಗ್ರಹಿಸಿ ಬಳಿಕ ಯಾರನ್ನ ಸಿಎಂ ಮಾಡಬೇಕು ಅಂತ ಅವರು ಯೋಚನೆ ಮಾಡಬೇಕು. ಅದಕ್ಕೆ ಈ ಬಗ್ಗೆ ಸಿಎಂ ಏನ್ ಹೇಳಿರುವುದು ಎಂಎಲ್ಎ ಗಳ ಸಂಖ್ಯೆಯು ಮುಖ್ಯ, ಹೈಕಮಾಂಡ್ ಆಶೀರ್ವಾದವೂ ಮುಖ್ಯ ಎಂದಿದ್ದಾರೆ. ಆ ಮಾತನ್ನ ಇಲ್ಲಿ ಪುನರುಚ್ಚರಿಸಿದ್ದೇನೆ. ಹಾಗಂತ ಎಂಎಲ್ಎಗಳ ಸಂಖ್ಯೆಯೇನು ಲೆಕ್ಕಕ್ಕಿಲ್ಲ ಎಂದರೆ ಅದು ಸರಿಯಲ್ಲ ಎಂದು ಡಿಕೆ ಶಿವಕುಮಾರ್ ಅವರ ಹೆಸರನ್ನು ಉಲ್ಲೇಖಿಸದೆ ಉತ್ತರ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now