Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಡಗಿನಲ್ಲಿ ಬಾಲಕಿಯನ್ನು ಕೊಂದವ ಸತ್ತಿಲ್ಲ ಬದುಕಿದ್ದಾನೆ : ಪೊಲೀಸರ ಅತಿಥಿಯಾದ ಪ್ರಕಾಶ್..!

Facebook
Twitter
Telegram
WhatsApp

ಕೊಡಗಿನ ಸೂರ್ಲಬಿಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾರನ್ನ ಪ್ರಕಾಶ್ ಎಂಬಾತ ರುಂಡ, ಮುಂಡ ಕತ್ತರಿಸಿ ಕ್ರೂರವಾಗಿ ಹತ್ಯೆ ಮಾಡಿದ್ದ. ನಿನ್ನೆಯೇ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಆದರೆ ಇದೀಗ ಆತ ಸತ್ತಿಲ್ಲ ಬದುಕಿದ್ದಾನೆ ಎಂಬುದು ತಿಳಿದು ಬಂದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಾಲಕಿಯ ಇಡೀ ದೇಹ ಪತ್ತೆಯಾಗಿತ್ತು. ಆದರೆ ರುಂಡ ಮಾತ್ರ ಸಿಕ್ಕಿರಲಿಲ್ಲ. ಇದೀಗ ರುಂಡವನ್ನು ತೆಗೆದುಕೊಂಡು ಹೋಗಿದ್ದ ಪ್ರಕಾಶ್ ಸಿಕ್ಕಿದ್ದಾನೆ.

ಪ್ರಕಾಶ್ ಕಾಡಿನಲ್ಲಿ ಪತ್ತೆಯಾಗಿದ್ದು, ಸೋಮವಾರಪೇಟೆ ಪೊಲೀಸರು ಆತನನ್ನು ಕರೆತರುತ್ತಿದ್ದಾರೆ. ರುಂಡ ಮತ್ತು ಕೋವಿಯೊಂದಿಗೆ ನಾಪತ್ತೆಯಾಗಿದ್ದಾತ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮೀನಾ ಮೊನ್ನೆ ತಾನೇ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮುಗಿಸಿದ್ದಳು. ಮುಂದಿನ ಶಿಕ್ಷಣದ ಕನಸ್ಸನ್ನು ಕಾಣುತ್ತಿದ್ದಳು. ಆದರೆ ಅಷ್ಟರಲ್ಲೇ ಕನಸ್ಸನ್ನು ನುಚ್ಚು ನೂರು ಮಾಡುವುದಲ್ಲದೆ, ಅವಳ ಜೀವವನ್ನೇ ಬಲಿ ಪಡೆದು ಬಿಟ್ಟ. ಮಗಳನ್ನು ಅಷ್ಟು ಕ್ರೂರವಾಗಿ ಹತ್ಯೆ ಮಾಡಿರುವುದನ್ನು ಕಂಡು ತಂದೆ-ತಾಯಿ ಕೊರಗುತ್ತಿದ್ದಾರೆ.

ಅದೇ ಊರಿನ ಪ್ರಕಾಶ್, ಮೀನಾಳನ್ನು ಪ್ರೀತಿಸುತ್ತಿದ್ದನಂತೆ. ಇತ್ತಿಚೆಗೆ ನಿಶ್ವಿತಾರ್ಥ ಕೂಡ ಮಾಡಿಕೊಳ್ಳಲು ಹೋಗಿದ್ದಾನೆ. ಆದರೆ ಆಗ ಪೊಲೀಸರಿಗೆ ವಿಷಯ ತಿಳಿದು, ಅದನ್ನು ತಡೆದಿದ್ದಾರೆ. ಅಪ್ರಾಪ್ತ ಬಾಲಕಿಗೆ ಮದುವೆ ಮಾಡುವುದು ಅಪರಾಧ. ಇನ್ನೆರಡು ವರ್ಷ ತುಂಬಿದ ಮೇಲೆ ಮದುವೆ ಮಾಡಿಕೊಳ್ಳಲು ಹೇಳಿದ್ದಾರೆ. ಆಗ ಸುಮ್ಮನಾದ ಪ್ರಕಾಶ್ ಎಸ್ಎಸ್ಎಲ್ಸಿ ಫಲಿತಾಂಶ ಬಂದೊಡನೆ ಮನೆಗೆ ಬಂದು, ಮೀನಾಳನ್ನು ಎಳೆದೊಯ್ದುದ್ದಾನೆ. ನಿರ್ಜನ ಪ್ರದೇಶದಲ್ಲಿ ರುಂಡ, ಮುಂಡ ಕತ್ತರಿಸಿ, ರುಂಡ ಮಾತ್ರ ಎತ್ತಿಕೊಂಡು ಹೋಗಿದ್ದಾನೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸಿದಾಗ ಇಂದು ಕಾಡಿನಲ್ಲಿ ಪತ್ತೆಯಾಗಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!