Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದ ಕೋಟೆಯನ್ನು ಬಲಿಷ್ಟಗೊಳಿಸಿದವರು ಪಾಳೆಯಗಾರ ಅರಸರು : ಡಾ.ಬಿ.ರಾಜಶೇಖರಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 09 : ಚಿತ್ರದುರ್ಗದ ಇತಿಹಾಸ ಸುಧೀರ್ಘವಾದುದು. ವೈವಿದ್ಯಮಯ ಹೆಸರುಗಳನ್ನು ಚಿತ್ರದುರ್ಗಕ್ಕೆ ಬಳಸಲಾಗಿದೆ. ಸೂಳ್ಗಲ್, ಚಿತ್ರಕಲ್ ದುರ್ಗ ಎಂತಲೂ ಹಿಂದೆ ಕರೆಯಲಾಗುತ್ತಿತ್ತು ಎಂದು ಇತಿಹಾಸ ಸಂಶೋಧಕರಾದ ಡಾ.ಬಿ.ರಾಜಶೇಖರಪ್ಪ ಹೇಳಿದರು.

ಕರ್ನಾಟಕ ಬಯಲಾಟ ಅಕಾಡೆಮಿ ಬಾಗಲಕೋಟೆ, ಸರ್ಕಾರಿ ಕಲಾ ಕಾಲೇಜು ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಕಲಾ ಕಾಲೇಜಿನ ಸಭಾಂಗಣದಲ್ಲಿ ಚಿತ್ರದುರ್ಗ ಪರಿಸರದ ಬಯಲಾಟಗಳು ಎರಡು ದಿನಗಳ ವಿಚಾರ ಸಂಕಿರಣದಲ್ಲಿ ಶನಿವಾರ ನಡೆದ ಮೊದಲ ಗೋಷ್ಠಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಐತಿಹಾಸಿಕ ಭೌಗೋಳಿಕ ಹಿನ್ನೆಲೆ ಎಂಬ ವಿಷಯ ಕುರಿತು ಮಾತನಾಡಿದರು.

ಹಿಡಿಂಬಿ ಪಟ್ಟಣ, ಬೂತನಾಥನ ದುರ್ಗವೆಂದು ಕರೆಯಲಾಗಿದೆ. ಭೌಗೋಳಿಕತೆ ಪ್ರಭಾವದಿಂದ ಅನೇಕ ಹೆಸರುಗಳಿಂದ ಚಿತ್ರದುರ್ಗಕ್ಕಿದೆ. ಹಿಡಂಬಿವನ ಎಂತಲೂ ಹೆಸರಿಸಲಾಗಿದೆ. ಹಾಗಾಗಿ ಭೌಗೋಳಿಕತೆ ಇಲ್ಲಿ ಪ್ರಧಾನ ಪಾತ್ರ ವಹಿಸಿದೆ ಎನ್ನುವುದಕ್ಕೆ ಇಲ್ಲಿ ಭೌಗೋಳಿಕ ಶಾಸನಗಳು ಇವೆ. ವೇದಾವತಿ ನದಿ ಕದಂಬ ಮಯೂರ ವರ್ಮನ ಇತಿಹಾಸದ ಭಾಗವಾಗಿ ಸೇರಬೇಕು. ಭೌಗೋಳಿಕ ಅಂಶಗಳು ಚರಿತ್ರೆಯಲ್ಲಿ ಹಾಸು ಹೊಕ್ಕಾಗಿವೆ. ಚಿತ್ರದುರ್ಗದ ಕೋಟೆಯನ್ನು ಬಲಿಷ್ಟಗೊಳಿಸಿದವರು ಪಾಳೆಯಗಾರ ಅರಸರು.

ಭರಮಣ್ಣನಾಯಕನ ಕಾಲದಲ್ಲಿ ತೋಪು, ತೋಟಗಳು ನಿರ್ಮಾಣವಾದವು. ರಸಸಿದ್ದರು, ನಾಥ ಸಂಪ್ರದಾಯಕ್ಕೆ ಸೇರಿದ ಯೋಗಿಗಳು ಇಲ್ಲಿ ವಾಸವಿದ್ದರೆನ್ನುವುದಕ್ಕೆ ಇಲ್ಲಿರುವ ಗವಿಗಳು, ಗುಹೆಗಳೆ ಕಾರಣ. ಚಿತ್ರದುರ್ಗ ಜಿಲ್ಲೆ ಭೌಗೋಳಿಕತೆಯನ್ನು ತನ್ನ ಒಡಲಲ್ಲಿಟ್ಟುಕೊಂಡಿದೆ ಎಂದರು.
ಜಿಲ್ಲೆಯ ಜಾನಪದ ಕುರಿತು ಡಾ.ಮೀರಾಸಾಬಿಹಳ್ಳಿ ಶಿವಣ್ಣ, ಜಿಲ್ಲೆಯ ಬಯಲಾಟ ಪರಂಪರೆ ಬಗ್ಗೆ ಡಾ.ಬಿ.ಎಂ.ಗುರುನಾಥ ಇವರುಗಳು ಮಾತನಾಡಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...