Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲಾಗುವುದು ; ಸಲೀಂ ಅಹಮದ್

Facebook
Twitter
Telegram
WhatsApp

ಚಿತ್ರದುರ್ಗ : ಸಂಘಟನೆ, ಬೂತ್ ಕಮಿಟಿಗಳ ರಚನೆಗೆ ಒತ್ತು ನೀಡುವ ಮೂಲಕ ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲಾಗುವುದೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದರು.

ದಾವಣಗೆರೆ ರಸ್ತೆಯಲ್ಲಿರುವ ಎನ್.ಬಿ.ಟಿ.ಹಾಲ್‍ನಲ್ಲಿ ಶುಕ್ರವಾರ ನಡೆದ ನವಸಂಲ್ಪ ಶಿಬಿರ ಉದ್ಘಾಟಿಸಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜೊತೆ ನಾಲ್ಕು ಗಂಟೆಗಳ ಕಾಲ ಚರ್ಚಿಸಿ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಲೀಂ ಅಹಮದ್‍ರವರು ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರುಗಳು ಶಿಬಿರದಲ್ಲಿ ಭಾಗವಹಿಸಿದ್ದರು.

2023 ರಲ್ಲಿ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಆರಕ್ಕೆ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಸಂಕಲ್ಪ ಮಾಡಲಾಯಿತು. ಶಿಬಿರದಲ್ಲಿ ನಾಲ್ಕು ಸಮಿತಿಗಳನ್ನು ರಚಿಸಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚಿಸಲಾಯಿತು ಎಂದು ಹೇಳಿದರು.

ಶಿಬಿರದ ವರದಿಯನ್ನು ಕೆ.ಪಿ.ಸಿ.ಸಿ.ಗೆ ಸಲ್ಲಿಸಿ ಪಕ್ಷ ಸಂಘಟನೆ ಕುರಿತು ಪ್ರಸ್ತಾಪಿಸಲಾಗುವುದು. ಮಹಿಳೆಯರು, ಯುವಕರು ಎಲ್ಲಾ ವರ್ಗದವರು ಬೂತ್‍ನಲ್ಲಿರಬೇಕು. ಎಲ್ಲಾ ಕಮಿಟಿಗಳನ್ನು ರಚನೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷದ ಇತಿಹಾಸ, ಹೋರಾಟ, ಜನಪರ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಿಳಿಸಲಾಗುವುದು. ಅದೇ ರೀತಿ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಭ್ರಷ್ಟಾಚಾರ, ನಲವತ್ತು ಪರ್ಸೆಂಟ್ ಕಮಿಷನ್ ಹಗರಣವನ್ನು ಮತದಾರರಿಗೆ ಮನವರಿಕೆ ಮಾಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದೆ ತರುತ್ತೇವೆ.

ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇದ್ಯಾವುದರ ಪರಿವೆ ಇಲ್ಲದ ಬಿಜೆಪಿ.ಭ್ರಷ್ಟಾಚಾರದಲ್ಲಿ ಮುಳುಗಿದೆ. ದೇಶದ ಪ್ರಧಾನಿ ಮೋದಿ ಅಪ್ಪಟ ಸುಳ್ಳುಗಾರ. 2014 ಪಾರ್ಲಿಮೆಂಟ್ ಚುನಾವಣಾ ಪೂರ್ವದಲ್ಲಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುತ್ತೇನೆ. ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಬಡವರ ಬ್ಯಾಂಕ್ ಖಾತೆಗಳಿಗೆ ಹದಿನೈದು ಲಕ್ಷ ರೂ.ಜಮಾ ಮಾಡುವುದಾಗಿ ನಂಬಿಸಿ ಯಾವುದನ್ನು ಈಡೇರಿಸಿಲ್ಲ.

ಬೆಳಗಾವಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ನಲವತ್ತು ಪರ್ಸೆಂಟ್ ಕಮಿಷನ್ ಅಕ್ರಮದ ವಿರುದ್ದ ನೇರವಾಗಿ ಮೋದಿಗೆ ಪತ್ರ ಬರೆದು ನಂತರ ಆತ್ಮಹತ್ಯೆ ಮಾಡಿಕೊಂಡರು. ಇವರ ಸಾವಿಗೆ ಕಾರಣವಾಗಿರುವ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ವಿನಃ ಬಂಧಿಸಿ ಸಿ.ಬಿ.ಐ. ಇ.ಡಿ. ಐ.ಡಿ. ಯಾವ ತನಿಖೆಯನ್ನು ನಡೆಸಲಿಲ್ಲ. ಕೇವಲ ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ.

ಇವೆಲ್ಲಾ ವಿಚಾರಗಳನ್ನಿಟ್ಟುಕೊಂಡು ಹೋರಾಟದ ಮೂಲಕ ಜನರ ಬಳಿ ಹೋಗಿ ಬಿಜೆಪಿ.ಯ ಅಕ್ರಮವನ್ನು ತಿಳಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದರು.

ಮಧ್ಯಪ್ರದೇಶ, ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆಸಿದ ಬಿಜೆಪಿ.ಈಗ ಮಹಾರಾಷ್ಟದಲ್ಲೂ ಆಪರೇಷನ್ ಮಾಡಿ ಮುಖ್ಯಮಂತ್ರಿಗಳನ್ನೆ ಬದಲಾಯಿಸಿದೆ.

ರಾಹುಲ್‍ಗಾಂಧಿಯನ್ನು ವಿನಾ ಕಾರಣ ವಿಚಾರಣೆ ನಡೆಸುತ್ತಿರುವುದನ್ನು ನೋಡಿದರೆ ಕೇಂದ್ರ ಸರ್ಕಾರ ಸಿ.ಬಿ.ಐ. ಇ.ಡಿ. ಐ.ಡಿ. ಎಲ್ಲವನ್ನು ದುರಪಯೋಗಪಡಿಸಿಕೊಳ್ಳುತ್ತಿದೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ.ಸರ್ಕಾರದಿಂದ ಯಾವುದೇ ಅಭಿವೃದ್ದಿಯಾಗಿಲ್ಲ.

ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಜನಸಾಮಾನ್ಯರು ಪರದಾಡುವಂತಾಗಿದೆ. ಹಾಗಾಗಿ ನವಸಂಕಲ್ಪ ಶಿಬಿರದಲ್ಲಿ ಬಿಜೆಪಿ.ವಿರುದ್ದ ಹೋರಾಡುವ ಸಂಕಲ್ಪ ಮಾಡಲಾಯಿತು ಎಂದು ತಿಳಿಸಿದರು.

ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕರುಗಳಾದ ಎ.ವಿ.ಉಮಾಪತಿ, ತಿಪ್ಪೇಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯೆ ಜಯಮ್ಮ ಬಾಲರಾಜ್, ಆರ್.ಮಂಜುನಾಥ್, ಮುರಳಿಧರ ಹಾಲಪ್ಪ, ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಮಹಿಳಾಧ್ಯಕ್ಷೆ ಶ್ರೀಮತಿ ಗೀತನಂದಿನಿಗೌಡ ಇನ್ನು ಮೊದಲಾದವರು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

error: Content is protected !!