Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಾಜಿ ಸಚಿವ ಗೋಪಾಲಯ್ಯಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಅರೆಸ್ಟ್..!

---Advertisement---

 

 

ಬೆಂಗಳೂರು: ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಬೆದರಿಕೆ ಹಾಕಿದ್ದ ಮಾಜಿ ಕಾರ್ಪೋರೇಟರ್ ಪದ್ಮರಾಜ್ ರನ್ನು ಬಂಧಿಸಲಾಗಿದೆ. ನನಗೆ ಹಣ ಬೇಕು. ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಕೊಲ್ಲುತ್ತೇನೆ. ತಾಕತ್ತಿದ್ದರೆ ಬಾ ಮನೆ ಹತ್ತಿರ ಎಂದು ಆವಾಜ್ ಹಾಕಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಆತನನ್ನು ಅರೆಸ್ಟ್ ಮಾಡಲಾಗಿದೆ ಎಂದು ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಪದ್ಮರಾಜ್ ಬಸವೇಶ್ವರನಗರ ಮಾಜಿ ಕಾರ್ಪೋರೇಟರ್ ಆಗಿದ್ದರು. ರಾತ್ರಿ 11.01ಕ್ಕೆ ಕರೆ ಮಾಡಿದ್ದ ಪದ್ಮರಾಜ್, ನನಗೆ ಹಣ ಬೇಕು, ಇಲ್ಲವಾದರೆ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ್ದರಂತೆ. ಈ ಕರೆ ಬಂದ ಕೂಡಲೇ ಗೋಪಾಲಯ್ಯ ಅವರು ಸ್ಪೀಕರ್ ಹಾಗೂ ಗೃಹಸಚಿವರಿಗೆ ಫ್ಯಾಕ್ಸ್ ಮೂಲಕ ದೂರು ನೀಡಿದ್ದಾರೆ‌. ತಡರಾತ್ರಿಯೇ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೂ ದೂರು ನೀಡಿದ್ದಾರೆ.

ಈ ಸಂಬಂಧ ಸ್ಪಷ್ಟನೆ ನೀಡಿರುವ ಮಾಜಿ ಸಚಿವ ಗೋಪಾಲಯ್ಯನವರು, ನನ್ನ ಹಾಗೂ ಪದ್ಮರಾಜ್ ನಡುವೆ ಯಾವುದೇ ರೀತಿಯ ಹಣಕಾಸು ವ್ಯವಹಾರವಿಲ್ಲ. ಈ ಹಿಂದೆಯೂ ಪದ್ಮರಾಜ್ ಇದೇ ರೀತಿ ಮಾಡಿದ್ದಾರೆ. ಈ ಬಾರಿ ಸುಮ್ಮನೆ ಆಗಲ್ಲ. ಅವನನ್ನು ಗಡಿಪಾರು ಮಾಡಬೇಕೆಂದು ಸದಸನದಲ್ಲೂ ಪ್ರಸ್ತಾಪ ಮಾಡಿದ್ದಾರೆ. ಆತನನ್ನು ಆರು ತಿಂಗಳು ಗಡಿಪಾರು ಮಾಡುವಂತೆ ಸೂಚಿಸಿದ್ದಾರೆ.

ಗೋಪಾಲಯ್ಯ ಅವರು ಸಚಿವರಾಗಿದ್ದಂತ ಸಂದರ್ಭದಲ್ಲಿ ಪದ್ಮರಾಜ್ ಅವರ ಮಗಳಿಗೆ ಬಿಜಿಎಸ್ ನಲ್ಲಿ ಸೀಟು ಕೊಡಿಸಿದ್ದರಂತೆ. ಅಷ್ಟೇ ಅಲ್ಲ ರಾಜಾಜಿನಗರದ ಇಎಸ್ಐನಲ್ಲೂ ವೈದ್ಯೆ ಕೆಲಸವನ್ನು ಕೊಡಿಸಿದ್ದರಂತೆ. ಆದರೆ ಸಮಸ್ಯೆ ಏನಾಗಿದೆ ಎಂಬುದರ ಮಾಹಿತಿ ಇನ್ನು ಸಿಕ್ಕಿಲ್ಲ. ಇದರ ನಡುವೆ ಪದ್ಮರಾಜ್, ಹಣ ಕೊಡಬೇಕೆಂದು ಕೊಲೆ ಬೆದರಿಕೆ ಹಾಕಿದ್ದಾರೆ. ಪೊಲೀಸರು ಅರೆಸ್ಟ್ ಮಾಡಿದ್ದು, ವಿಚಾರಣೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...