Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಸಚಿವ ಗೋಪಾಲಯ್ಯಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಅರೆಸ್ಟ್..!

Facebook
Twitter
Telegram
WhatsApp

 

 

ಬೆಂಗಳೂರು: ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಬೆದರಿಕೆ ಹಾಕಿದ್ದ ಮಾಜಿ ಕಾರ್ಪೋರೇಟರ್ ಪದ್ಮರಾಜ್ ರನ್ನು ಬಂಧಿಸಲಾಗಿದೆ. ನನಗೆ ಹಣ ಬೇಕು. ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಕೊಲ್ಲುತ್ತೇನೆ. ತಾಕತ್ತಿದ್ದರೆ ಬಾ ಮನೆ ಹತ್ತಿರ ಎಂದು ಆವಾಜ್ ಹಾಕಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಆತನನ್ನು ಅರೆಸ್ಟ್ ಮಾಡಲಾಗಿದೆ ಎಂದು ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಪದ್ಮರಾಜ್ ಬಸವೇಶ್ವರನಗರ ಮಾಜಿ ಕಾರ್ಪೋರೇಟರ್ ಆಗಿದ್ದರು. ರಾತ್ರಿ 11.01ಕ್ಕೆ ಕರೆ ಮಾಡಿದ್ದ ಪದ್ಮರಾಜ್, ನನಗೆ ಹಣ ಬೇಕು, ಇಲ್ಲವಾದರೆ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ್ದರಂತೆ. ಈ ಕರೆ ಬಂದ ಕೂಡಲೇ ಗೋಪಾಲಯ್ಯ ಅವರು ಸ್ಪೀಕರ್ ಹಾಗೂ ಗೃಹಸಚಿವರಿಗೆ ಫ್ಯಾಕ್ಸ್ ಮೂಲಕ ದೂರು ನೀಡಿದ್ದಾರೆ‌. ತಡರಾತ್ರಿಯೇ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೂ ದೂರು ನೀಡಿದ್ದಾರೆ.

ಈ ಸಂಬಂಧ ಸ್ಪಷ್ಟನೆ ನೀಡಿರುವ ಮಾಜಿ ಸಚಿವ ಗೋಪಾಲಯ್ಯನವರು, ನನ್ನ ಹಾಗೂ ಪದ್ಮರಾಜ್ ನಡುವೆ ಯಾವುದೇ ರೀತಿಯ ಹಣಕಾಸು ವ್ಯವಹಾರವಿಲ್ಲ. ಈ ಹಿಂದೆಯೂ ಪದ್ಮರಾಜ್ ಇದೇ ರೀತಿ ಮಾಡಿದ್ದಾರೆ. ಈ ಬಾರಿ ಸುಮ್ಮನೆ ಆಗಲ್ಲ. ಅವನನ್ನು ಗಡಿಪಾರು ಮಾಡಬೇಕೆಂದು ಸದಸನದಲ್ಲೂ ಪ್ರಸ್ತಾಪ ಮಾಡಿದ್ದಾರೆ. ಆತನನ್ನು ಆರು ತಿಂಗಳು ಗಡಿಪಾರು ಮಾಡುವಂತೆ ಸೂಚಿಸಿದ್ದಾರೆ.

ಗೋಪಾಲಯ್ಯ ಅವರು ಸಚಿವರಾಗಿದ್ದಂತ ಸಂದರ್ಭದಲ್ಲಿ ಪದ್ಮರಾಜ್ ಅವರ ಮಗಳಿಗೆ ಬಿಜಿಎಸ್ ನಲ್ಲಿ ಸೀಟು ಕೊಡಿಸಿದ್ದರಂತೆ. ಅಷ್ಟೇ ಅಲ್ಲ ರಾಜಾಜಿನಗರದ ಇಎಸ್ಐನಲ್ಲೂ ವೈದ್ಯೆ ಕೆಲಸವನ್ನು ಕೊಡಿಸಿದ್ದರಂತೆ. ಆದರೆ ಸಮಸ್ಯೆ ಏನಾಗಿದೆ ಎಂಬುದರ ಮಾಹಿತಿ ಇನ್ನು ಸಿಕ್ಕಿಲ್ಲ. ಇದರ ನಡುವೆ ಪದ್ಮರಾಜ್, ಹಣ ಕೊಡಬೇಕೆಂದು ಕೊಲೆ ಬೆದರಿಕೆ ಹಾಕಿದ್ದಾರೆ. ಪೊಲೀಸರು ಅರೆಸ್ಟ್ ಮಾಡಿದ್ದು, ವಿಚಾರಣೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

error: Content is protected !!