Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೆಡ್ ನಲ್ಲಿ ರೇಣುಕಾಸ್ವಾಮಿ ಬೇಡಿಕೊಂಡ ಫೋಟೋ ವೈರಲ್ ..!

Facebook
Twitter
Telegram
WhatsApp

ಬೆಂಗಳೂರು: ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಂಡರು ಎಂಬ ಗಾದೆ ಮಾತಿದೆ. ದರ್ಶನ್ ವಿಚಾರದಲ್ಲಿ ಇದು ಅಕ್ಷರಶಃ ಸತ್ಯವಾಗಿದೆ. ರೇಣುಕಾಸ್ವಾಮಿ, ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂಬ ಕಾರಣಕ್ಕೆ ಆತನನ್ನ ಚಿತ್ರದುರ್ಗದಿಂದ ಪಟ್ಟಣಗೆರೆ ಶೆಡ್ ವರೆಗೂ ಕರೆತಂದರು. ಅದಾದ ಮೇಲೆ ಎಚ್ಚರಿಕೆ ಕೊಟ್ಟಾದರು ಕಳುಹಿಸಿದರಾ ಇಲ್ಲ. ಆ ಕ್ಷಣಕ್ಕೆ‌ ಕೋಪದ ಕೈಗೆ ಬುದ್ದಿ ಕೊಟ್ಟ ಇಡೀ ಗ್ಯಾಂಗ್ ರೇಣುಕಾಸ್ವಾಮಿಯನ್ನು ಹಿಂಸಿಸಿದರು. ಅದರ ಪರಿಣಾಮ ಒಣಕಲು ದೇಹದ ರೇಣುಕಾಸ್ವಾಮಿ ಸತ್ತು ಹೋದ. ಅದೇ ಕೇಸಲ್ಲಿ ಮೂರು ತಿಂಗಳಿಂದ ದರ್ಶನ್ ಅಂಡ್ ಗ್ಯಾಂಗ್ ಸೆರೆವಾಸದಲ್ಲಿದೆ. ನಿನ್ನೆಯಷ್ಟೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಇನ್ನಷ್ಟು ಸಂಕಷ್ಟ ಎದುರಾಗಿದೆ. ಕೊಲೆ ಮಾಡಿದ್ದರ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಪೊಲೀಸರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಪೊಲೀಸರು ಈ ಕೊಲೆ ಕೇಸಲ್ಲಿ ಸಾಕಷ್ಟು ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಅದರಲ್ಲಿ ಶೆಡ್ ನಲ್ಲಿ ರೇಣುಕಾಸ್ವಾಮಿ ಬೇಡಿಕೊಂಡ ಫೋಟೋ ಕೂಡ. ದರ್ಶನ್ ಅಂಡ್ ಗ್ಯಾಂಗ್, ರೇಣುಕಾಸ್ವಾಮಿಯನ್ನು ರಕ್ತ ಚೆಲ್ಲುವಂತೆ ಹೊಡೆದಿದ್ದಾರೆ. ಆ ಸಮಯದಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಬೇಡಿಕೊಂಡಿದ್ದ. ಆದರೂ ಗ್ಯಾಂಗ್ ಬಿಟ್ಟಿರಲಿಲ್ಲ. ಕೈಮುಗಿದು ಬೇಡಿಕೊಂಡ ಫೋಟೋಗಳನ್ನು ತೆಗೆದಿದ್ದರು. ಕೇಸಲ್ಲಿ ತಗಲಾಕಿಕೊಂಡ ಮೇಲೆ ಆ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ತನಿಖೆ ನಡೆಸುವ ವೇಳೆ ಪೊಲೀಸರು ಆರೋಪಿಗಳ ಮೊಬೈಲ್ ರಿಟ್ರೀವ್ ಮಾಡಿ, ಆ ಫೋಟೋಗಳನ್ನು ಚಾರ್ಜ್ ಶೀಟ್ ನಲ್ಲಿ ಸಲ್ಲಿಕೆ ಮಾಡಿದ್ದಾರೆ.

ಸದ್ಯ ಆ ಕೊಲೆಯಾದ ಮೇಲೆ ಏನೆಲ್ಲಾ ಆಯ್ತು ಎಂಬುದರ ಇಂಚಿಂಚು ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಎಲ್ಲಾ ರೀತಿಯ ಸಾಕ್ಷಿಗಳನ್ನು ಕೋರ್ಟ್ ಗೆ ನೀಡಿದ್ದಾರೆ. ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆಸಲು ಪೊಲೀಸರು ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!