Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೈರಲ್ ಆಗ್ತಿರುವ ಫೋಟೋ ನಿಜವಾದ ರಾಮಲಲ್ಲಾ ಅಲ್ವಾ..? ಪ್ರಧಾನ ಅರ್ಚಕರು ಹೇಳಿದ್ದೇನು..?

---Advertisement---

 

ಸುದ್ದಿಒನ್ :  ಜನವರಿ 22ರಂದು ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆಯಾಗಲಿದೆ. ಈ ದಿನಕ್ಕಾಗಿ ಇಡೀ ಭಾರತ ಕಾಯುತ್ತಿದೆ. ರಾಮಲಲ್ಲಾ ಮೂರ್ತಿ ಅದಾಗಲೇ ಅಯೋಧ್ಯೆ ತಲುಪಿದೆ. ಯಾವಾಗ ಮೂರ್ತಿಯ ದರ್ಶನವಾಗುತ್ತದೆಯೋ ಎಂದು ಕಾಯುತ್ತಿದ್ದವರಿಗೆ, ನಿನ್ನೆ ಸಂಜೆಯೇ ರಾಮ ಲಲ್ಲಾ ದರ್ಶನ ನಿಡೀದ್ದಾನೆ. ಎಲ್ಲರ ವಾಟ್ಸಾಪ್, ಫೇಸ್ಬುಕ್ ಗಳಲ್ಲಿ ರಾಮಲಲ್ಲಾ ಫೋಟೋ ಹರಿದಾಡುತ್ತಿದೆ.

https://x.com/ANI/status/1748552719240225029?s=20

ಈ ಬಗ್ಗೆ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಾಣ ಪ್ರತಿಷ್ಟೆಗೊಳ್ಳುವ ಮುನ್ನ ಮುಚ್ಚಿರುವ ಬಾಲರಾಮನ ಮೂರ್ತಿಯ ಕಣ್ಣುಗಳನ್ನು ತೆರೆಯುವುದಿಲ್ಲ. ಶ್ರೀರಾಮನ ಕಣ್ಣುಗಳು ಕಾಣುವ, ವೈರಲ್ ಆಗುತ್ತಿರುವ ಮೂರ್ತಿ ನಿಜವಾದುದ್ದಲ್ಲ ಎಂದಿದ್ದಾರೆ.

https://x.com/ANI/status/1748552719240225029?s=20

ಇನ್ನು ಮೂರ್ತಿ ಕಾಣುವಂತ ಫೋಟೋ ಬಹಿರಂಗವಾಗಿದೆ ಆದರೆ ಯಾರಿಂದ ಆಯಿತು..? ವಿಗ್ರಹದ ಚಿತ್ರಗಳು ಹೇಗೆ ವೈರಲ್ ಆದವು ಎಂಬುದರ ಬಗ್ಗೆ ತನಿಖೆಯಾಗಬೇಕು. ಬಾಲ ರಾಮನ ಮೂರ್ತಿಯನ್ನು ಬಟ್ಟೆಯಿಂದ ಮುಚ್ಚಲಾಗಿದೆ. ವಿಗ್ರಹವನ್ನೂ ಇನ್ನೂ ಬಹಿರಂಗ ಪಡಿಸಿಲ್ಲ. ಅಂತಿಮಗೊಳಿಸಿರುವ ಬಾಲರಾಮನ ಮೂರ್ತಿಯನ್ನು ಬಟ್ಟೆಯಿಂದ ಮುಚ್ಚಲಾಗಿದೆ. ಅಯೋಧ್ಯೆಯ ಬಾಲರಾಮನದ್ದು ಎನ್ನಲಾದ ಬಾಲರಾಮನ ಮೂರ್ತಿಯನ್ನು ಬಟ್ಟೆಯಿಂದ ಮುಚ್ಚಲಾಗಿದೆ. ಆದರೆ ಶುಕ್ರವಾರ ಸಂಜೆಯಿಂದ ಈ ಫೋಟೋಗಳು ವೈರಲ್ ಆಗುತ್ತಿದೆ. ಯಾರೂ ಈ ಫೋಟೋಗಳನ್ನು ವೈರಲ್ ಮಾಡಿದ್ದಾರೆ ಎಂಬ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ವಿಗ್ರಹವನ್ನು ದೇವಾಲಯದ ಒಳಗೆ ತರುವುದಕ್ಕೂ ಮುನ್ನವೇನಾದರೂ ಫೋಟೋಗಳನ್ನು ತೆಗೆದಿರಬಹುದು. ಆ ಫೋಟೋಗಳು ಈಗ ವೈರಲ್ ಆಗುತ್ತಿರಬಹುದು. ಕೆಲವರು ಈ ಫೋಟೋ ಹಂಚಿಕೊಳ್ಳುತ್ತಿಲ್ಲ. ಜನವರಿ 22ರಂದು ಪ್ರಾಣ ಪ್ರತಿಷ್ಠಾಪನೆಯಾದ ನಂತರವಷ್ಟೇ ಬಾಲರಾಮನ ಮೂರ್ತಿಯ ಸಂಪೂರ್ಣ ದರ್ಶನವಾಗಲಿದೆ. ಉದ್ಘಾಟನೆ ಮಾಡಲು ಪ್ರಧಾನಿ ಮೋದಿ ಅವರು ಕಠಿಣ ವ್ರತ ಮಾಡುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment