Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಹರಂ ವೇಳೆ ಹೆಬ್ಬಳ್ಳಿ ಲಾಲಸಾಬ್ ಅಜ್ಜ ನುಡಿದ ಭವಿಷ್ಯ ವೈರಲ್

---Advertisement---

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಪ್ರಸಿದ್ಧ ಲಾಲಸಾಬವಲಿ ದರ್ಗಾದಲ್ಲಿ ಮೊಹರಂ ಹಬ್ಬದ ಅಂಗವಾಗಿ ಲಾಲಸಾಬ್ ಅಜ್ಜ ನುಡಿದ ಭವಿಷ್ಯ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಭವಿಷ್ಯ ನುಡಿದ ಅಜ್ಜ, ಮಳೆ ಹಾಗೂ ಬೆಳೆ ಪರಿಸ್ಥಿತಿ ಕುರಿತು ಆತಂಕಕಾರಿ ಸೂಚನೆ ನೀಡಿರುವುದು ಗ್ರಾಮಸ್ಥರ ಗಮನ ಸೆಳೆದಿದೆ.

ಮೊಹರಂ ಹಬ್ಬದ ಸಂದರ್ಭದಲ್ಲಿ ಲಾಲಸಾಬ್ ಅಜ್ಜ ನುಡಿಯುವ ಭವಿಷ್ಯವನ್ನು ಕೇಳಲು ನೂರಾರು ಭಕ್ತರು ಸೇರುವ ಪರಂಪರೆ ಇದೆ. ಈ ಬಾರಿ ಅವರು, “ಮೂಡಲ ದೇಶಕ್ಕೂ ಬಡವಲ ದೇಶಕ್ಕೂ ಬರದ ಛಾಯೆ ಕಾಡಲಿದೆ. ಮಳೆ ಸಾಧಾರಣವಾಗಿದ್ದು, ಬೆಳೆ ನಿರೀಕ್ಷಿತ ಮಟ್ಟದಲ್ಲಿ ಬರುವುದಿಲ್ಲ. ಕಾಲವೂ ಅಷ್ಟೇನು ಅನುಕೂಲಕರವಾಗಿರುವುದಿಲ್ಲ” ಎಂಬ ಅರ್ಥದ ಭವಿಷ್ಯ ನುಡಿದಿದ್ದಾರೆ.ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಮಳೆಯ ಕೊರತೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಈ ಹೇಳಿಕೆ ಜನರಲ್ಲಿ ಕುತೂಹಲ ಮತ್ತು ಆತಂಕಕ್ಕೆ ಕಾರಣವಾಗಿದೆ. ರೈತರು ಮಳೆಯ ನಿರೀಕ್ಷೆಯಲ್ಲಿರುವ ಸಂದರ್ಭದಲ್ಲೇ ಲಾಲಸಾಬ್ ಅಜ್ಜನ ಭವಿಷ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಉಲ್ಲೇಖ
ಹವಾಮಾನದ ಜೊತೆಗೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಅಜ್ಜ ಪ್ರಸ್ತಾಪಿಸಿದ್ದು, ಅಧಿಕಾರ ಮತ್ತು ನಾಯಕತ್ವದ ಕುರಿತ ಹೇಳಿಕೆಗಳು ಕುತೂಹಲಕ್ಕೆ ಕಾರಣವಾಗಿವೆ. “ಖುರ್ಚಿ ಕುರಿತು ಹಲವು ಮಂದಿ ಕೇಳುತ್ತಿದ್ದಾರೆ” ಎಂಬ ಅರ್ಥದ ಮಾತುಗಳನ್ನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಮೊಹರಂ ಸಂಭ್ರಮ
ಇನ್ನೊಂದೆಡೆ ರಾಜ್ಯದ ವಿವಿಧ ಭಾಗಗಳಲ್ಲಿ ಮೊಹರಂ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮ ಸೇರಿದಂತೆ ಹಲವು ಕಡೆಗಳಲ್ಲಿ ಅಲೆ ದೇವರಗಳ ಮೆರವಣಿಗೆ, ಧಾರ್ಮಿಕ ಆಚರಣೆಗಳು ಹಾಗೂ ಹಿಂದೂ-ಮುಸ್ಲಿಂ ಸೌಹಾರ್ದತೆಯ ಕಾರ್ಯಕ್ರಮಗಳು ನಡೆದವು.
ಲಾಲಸಾಬ್ ಅಜ್ಜ ಈ ಹಿಂದೆ ನುಡಿದಿದ್ದ ಕೆಲವು ಭವಿಷ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದವು. ಈ ಬಾರಿಯ ಭವಿಷ್ಯವೂ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now