Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಗ ಆಗಿರುವ ಮದುವೆ ಹೆಚ್ಚು ದಿನ ಉಳಿಯಲ್ಲ :ಗೃಹ ಸಚಿವ ಜಿ.ಪರಮೇಶ್ವರ್

Facebook
Twitter
Telegram
WhatsApp

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆ ಬಗ್ಗೆ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್, ರಾಜ್ಯದಲ್ಲಿ ಇನ್ಮೇಲೆ ನಮಗೆ ಸ್ಥಾನ ಇಲ್ಲ ಎಂದು ಬಿಜೆಪಿ ಮತ್ತು ಜೆಡಿಎಸ್ ಗೆ ಗೊತ್ತಾಗಿದೆ. ಇಲ್ಲಸಲ್ಲದ ಆಪಾದನೆಗಳನ್ನು ಕೂಡಿ ಹಾಕಿಕೊಂಡು, ಜೆಡಿಎಸ್ ಹಾಗೂ ಬಿಜೆಪಿ ನಮ್ಮ ಮೇಲೆ ಆಪಾದನೆ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಮೊದಲು ನಮ್ಮ ಜೊತೆಗೂ ಸೇರಿಕೊಂಡಿದ್ದರು. ನಮ್ಮ ಜೊತೆಗೆ ಸೇರಿಕೊಂಡ 14 ತಿಂಗಳಲ್ಲಿಯೇ ಅವರೇ ಮಾಡಿಕೊಂಡ ತಪ್ಪನಿಂದ ಅಧಿಕಾರ ಬಿಟ್ಟು ಹೋದರು. ಈಗ ಬಿಜೆಪಿ ಸೇರಿಕೊಂಡಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ಅವಕಾಶ ಬೇರೆ ಸಿಕ್ಕಿದೆ. ಭಾರತೀಯ ಜನತಾ ಪಾರ್ಟಿಗೆ ಶೀಘ್ರವೇ ಕುಮಾರಸ್ವಾಮಿ ಏನು ಎಂಬುದು ಗೊತ್ತಾಗುತ್ತದೆ. ಈಗಾಗಲೇ ಗೊತ್ತಾಗಿದೆ ಎಂಬುದಕ್ಕೆ ನಿನ್ನೆ ನಡೆದ ಬೆಳವಣಿಗೆಯೇ ಸಾಕ್ಷಿ. ಬಿಜೆಪಿಯ ಹಲವು ನಾಯಕರು ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾನೀಗ ದಾರಿಯಲ್ಲಿ ಬರುವಾಗ ನೋಡಿದೆ. ಎಲ್ಲಾ ಕಡೆ ಬಿಜೆಪಿಯ ಪಕ್ಷದ್ದೇ ಬ್ಯಾನರ್ ಗಳು, ಜೆಡಿಎಸ್ ಪಕ್ಷದ ಒಂದು ಬ್ಯಾನರ್ ಕೂಡ ಕಂಡಿಲ್ಲ.

 

ಇದನ್ನ ನೋಡಿದಾಗ ಅರ್ಥ ಮಾಡಿಕೊಳ್ಳಬೇಕು. ನೀವೇನು ಮದುವೆ ಮಾಡಿಕೊಂಡಿದ್ದೀರಿ. ಅದು ಹೆಚ್ಚು ದಿನ ನಡೆಯುವುದಿಲ್ಲ. ಡಿವೋರ್ಸ್ ಬಹಳ ಬೇಗ ಆಗುತ್ತದೆ. ಬಹಳ ಅಂದ್ರೆ ಬಹಳ ಬೇಗ ಆಗುತ್ತದೆ. ಇಂಥ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಕುಮಾರಸ್ವಾಮಿ ಮೇಕೆ ಗರಂ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!