Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಣನೀಯವಾಗಿ ಇಳಿಕೆ ಕಂಡ ಚಿನ್ನದ ದರ : ಇಂದು ಚಿನ್ನದ ಬೆಲೆ ಎಷ್ಟಿದೆ..?

Facebook
Twitter
Telegram
WhatsApp

 

ನವದೆಹಲಿ: ಕೇಂದ್ರ ಬಜೆಟ್ ಮಂಡನೆಯಾದ ಬೆನ್ನಲ್ಲೇ ಚಿನ್ನದ ದರ ಕೂಡ ಇಳಿಕೆಯತ್ತ ಮುಖ ಮಾಡಿದೆ. ಸತತವಾಗಿ ಮೂರು ದಿನಗಳಿಂದ ಇಳಿಕೆಯಾಗಿದ್ದು, ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ. ಇದು ಮಹಿಳಾ ಮಣಿಗಳ ಸಂತಸವನ್ನು ಹೆಚ್ಚಿಸಿದೆ.

ಇಂದಿನ ಮಾರುಕಟ್ಟೆಯ ಬೆಲೆ 24 ಕ್ಯಾರೆಟ್‌ನ 10 ಗ್ರಾಂಗೆ 68,720 ಇದ್ದು, 22 ಕ್ಯಾರೆಟ್ 10 ಗ್ರಾಂಗೆ 62,000 ರೂ ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ​ 1 ಗ್ರಾಂ ಚಿನ್ನದ ಬೆಲೆಯು 6,325 ರೂಪಾಯಿ ಇದ್ದು, 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆಯು 6,900 ರೂ ಇದೆ. 22 ಕ್ಯಾರೆಟ್​ 8 ಗ್ರಾಂ ಚಿನ್ನದ ಬೆಲೆ 50,600 ಇದೆ. 24 ಕ್ಯಾರೆಟ್ 8 ಗ್ರಾಂ ಚಿನ್ನದ ಬೆಲೆ 55,200 ಇದೆ.

ಚಿನ್ನದ ದರ ಇದೇ ರೀತಿ ಇಳಿಕೆಯಾದರೆ ಎಲ್ಲರಿಗೂ ಖುಷಿ. ಆದರೆ ತಜ್ಞರು ಹೇಳುವ ಚಿನ್ನದ ದರ ಏರಿಕೆಯಾದರೂ ಆಗಬಹುದು, ಈ ತಿಂಗಳ ಕೊನೆಯ ತನಕ ಕಾದು ಹೂಡಿಕೆ ಮಾಡುವುದು ಉತ್ತಮ ಎಂದೇ ಸಲಹೆಯನ್ನು ನೀಡಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ಚಿನ್ನದ ಮೇಲೆ ಶೇಕಡ 6% ರಷ್ಟು ಕಸ್ಟಮ್ಸ್ ಸುಂಕದಲ್ಲಿ ಕಡಿಮೆ ಮಾಡಲಾಗಿದೆ. ಇದರ ಪರಿಣಾಮ ಚಿನ್ನ ಮತ್ತು ಬೆಳ್ಳಿಯಲ್ಲಿ ದರ ಇಳಕೆಯಾಗುತ್ತಲೇ ಇದೆ. ಆದರೆ ಇದು ಆಷಾಢಮಾಸವಾಗಿರುವ ಕಾರಣ ಜನರು ಹೆಚ್ಚಿನ ಸಂಖ್ಯೆಯಲ್ಲೇನು ಚಿನ್ನ ಖರೀದಿ ಮಾಡುತ್ತಿಲ್ಲ. ಇನ್ನೊಂದು ವಾರ ಆಷಾಢ ಕಳೆದು ಶ್ರಾವಣ ಬರಲಿದ್ದು, ಆ ಬಳಿಕ ಚಿನ್ನದ ದರ ಏನಾಗಬಹುದು ಎಂಬುದನ್ನು ಯೋಚನೆ ಮಾಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ ವೈದ್ಯರಾದ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!