ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..? ದಿನೇ ದಿನೇ ಬಂಗಾರದ ಬೆಲೆ ಗಗನಕ್ಕೇರುತ್ತಿದೆ. ಒಂದು ಗ್ರಾಂ ತೆಗೆದುಕೊಳ್ಳಬೇಕೆಂದರು ಆರೇಳು ಸಾವಿರ ರೂಪಾಯಿ ಬೇಕಾಗಿದೆ.

ಅಕ್ಷಯ ತೃತೀಯ ದಿನ ಬೆಳ್ಳಿ, ಬಂಗಾರವನ್ನು ಮನೆಗೆ ತಂದರೆ ಶುಭ ಶಕುನ, ಅಕ್ಷಯ ಪಾತ್ರೆಯಷ್ಟೇ ಬಂಗಾರ ತುಂಬುತ್ತೆ ಎಂಬ ನಂಬಿಕೆ ಇದೆ. ಹೀಗಾಗಿ ಬಂಗಾರ ಖರೀದಿಸಲು ಸಾಕಷ್ಟು ಜನ ಮುಂದಾಗುತ್ತಾರೆ. ಈ ಸಮಯದಲ್ಲಿ ಬಂಗಾರದ ಮಳಿಗೆಗಳು ಕೂಡ ಆಫರ್ ಗಳನ್ನು ನೀಡುತ್ತಾರೆ. ಆದರೆ ಬಂಗಾರದ ಬೆಲೆಯಲ್ಲಿ ಮಾತ್ರ ಇಳಿಕೆಯಾಗುತ್ತಿಲ್ಲವಲ್ಲ‌‌. ಇಂದು ಬಂಗಾರದ ಬೆಲೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ.

ಇಂದು ಬೆಂಗಳೂರಿನಲ್ಲಿ ಬಂಗಾರದ ಬೆಲೆ 22 ಕ್ಯಾರೆಟ್ ಚಿನ್ನ ಒಂದು ಗ್ರಾಂಗೆ 6,585 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 7,183 ರೂಪಾಯಿ ಆಗಿದೆ. ಒಂದು ಗ್ರಾಂ ಬೆಳ್ಳಿಯ ಬೆಲೆ 82.60 ರೂಪಾಯಿ ಆಗಿದೆ. ಹೀಗಾಗಿ ಚಿನ್ನ ಖರೀದಿ ಮಾಡಬೇಕೆಂದುಕೊಳ್ಳುವ ಮಹಿಳೆಯರಿಗೆ ಇದೊಂಥರ ಆಘಾತಕಾರಿಯೇ ಆಗಿದೆ.

ಚಿನ್ನದ ಬೆಲೆಯಲ್ಲಿ ಇನ್ಮುಂದೆ ಇಳಿಕೆ ಕಾಣುವುದು ಕಷ್ಟ ಸಾಧ್ಯವಾಗಿದೆ. ದಿನೇ ದಿನೇ ಏರಿಕೆಯಾಗುತ್ತಲೇ ಇರುವ ಚಿನ್ನದ ದರ, ಮುಂದಕ್ಕೆ ಹತ್ತು ಗ್ರಾಂಗೆ ಒಂದು ಲಕ್ಷ ಮುಟ್ಟುವ ಸಾಧ್ಯತೆಯೂ ಇದೆ. ಹೀಗಾಗಿ ಚಿನ್ನ ಖರೀದಿ ಮಾಡಬೇಕೆಂದುಕೊಂಡವರು ಬೆಲೆ ಕಡಿಮೆಯಾಗುವುದನ್ನು ಕಾಯುವುದಕ್ಕಿಂತ ಈಗಲೇ ಖರೀದಿ ಮಾಡಿದರೆ ಉತ್ತಮ. ಮುಂದೇ ಇಳಿಕೆಯಾಗುವುದು ಅನುಮಾನವೆಂದೇ ಚಿನ್ನದ ಮಾರುಕಟ್ಟೆಯ ತಜ್ಞರು ಹೇಳುತ್ತಿದ್ದಾರೆ.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

15 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

52 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago