Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತ್ತೆ ಹೆಚ್ಚಾಯ್ತು ಅಡಿಕೆ ಬೆಲೆ : ರೈತರ ಮೊಗದಲ್ಲಿ ಸಂತಸವೋ ಸಂತಸ

---Advertisement---

ಅಡಿಕೆ ಬೆಳೆಗಾರರಲ್ಲಿ ಮತ್ತೆ ಖುಷಿಯಾಗುವ ದಿನ ಸಂಭವಿಸಿದೆ. 55 ಸಾವಿರ ರೂಪಾಯಿಗೆ ತಲುಪಿತ್ತು. ಆದರೆ ಇದ್ದಕ್ಕಿದ್ದ ಹಾಗೇ 44 ಸಾವಿರಕ್ಕೆ ಬಂದು ನಿಂತಿತ್ತು. ಇದು ಅಡಿಕೆ ಬೆಳೆಗಾರರಿಗೆ ಶಾಕ್ ಆಗಿತ್ತು. ಈಗ ಸ್ವಲ್ಪ ಸುಧಾರಿಸಿಕೊಳ್ಳುವ ಹಂತ ತಲುಪಿದೆ. ಮೊದಲೇ ಕೊಳೆ ರೋಗ, ಒಣರೋಗದಿಂದ ಅಡಿಕೆ ಫಸಲು ಕುಸಿಯುವುದಕ್ಕೆ ಶುರುವಾಗಿತ್ತು. ರೈತರನ್ನು ಅಡಿಕೆ ಬೆಳೆಯನ್ನು ಉಳಿಸಿಕೊಳ್ಳುವುದಕ್ಕೆನೆ ಕಷ್ಟವಾಗಿತ್ತು. ಇಂಥ ಸಂದರ್ಭದಲ್ಲಿ ಬೆಲೆ ಕಡಿಮೆಯಾಗಿದ್ದು ರೈತರಿಗೆ ಆತಂಕವೂ ಆಗಿತ್ತು. ಇದೀಗ ಮತ್ತೆ ಏರಿಕೆಯತ್ತ ಮುಖ ಮಾಡಿದೆ.

ಭದ್ರಾವತಿಯ ರಾಶಿ ಅಡಿಕೆ 50,300 ರೂಪಾಯಿಗೆ ಮಾರಾಟವಾಗಿದೆ. ಇನ್ನು ಶಿವಮೊಗ್ಗ ಮಾರುಕಟ್ಟೆಯಲ್ಲಿ ಕನಿಷ್ಠ 31,400 ರೂಪಾಯಿ ಇದ್ದ ಅಡಿಕೆ ಗರಿಷ್ಠ 49,899 ರೂಒಅಯಿಗೆ ಮಾರಾಟವಾಗಿದೆ. ಉಳಿದಂತೆ ಸರಕು ಅಡಿಕೆ ಕ್ವಿಂಟಾಲ್ ಗೆ 48,000 ರೂಪಾಯಿ ಇತ್ತು. ಆದರೆ 80,210 ರೂಪಾಯಿ ಆಗಿದೆ.

ಯಾವ್ಯಾವ ಅಡಿಕೆ, ಎಷ್ಟೆಷ್ಟು ರೂಪಾಯಿಗೆ ಮಾರಾಟವಾಗಿದೆ ಎಂಬ ವರದಿ ಇಲ್ಲಿದೆ:

ಶಿವಮೊಗ್ಗ ಬೆಟ್ಟೆ ಅಡಿಕೆ ಕನಿಷ್ಠ 52,114 ಇದ್ದು ಗರಿಷ್ಠ 57,629 ಮಾರಾಟವಾಗಿದೆ. ರಾಶಿ ಅಡಿಕೆ ಕನಿಷ್ಠ 31,400 ಇದ್ದು ಗರಿಷ್ಠ 49,899 ಮಾರಾಟವಾಗಿದೆ‌. ಸರಕು ಅಡಿಕೆ ಕನಿಷ್ಠ 48,000 ಇದ್ದು ಗರಿಷ್ಠ 80,210 ಮಾರಾಟವಾಗಿದೆ. ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಕನಿಷ್ಠ 45,000 ಇದ್ದು ಗರಿಷ್ಠ 50,799 ಮಾರಾಟವಾಗಿದೆ.

 

ಕೊಬ್ಬರಿ ಬೆಲೆ ಹೀಗಿದೆ: ಅರಸೀಕೆರೆ ಮಾರುಕಟ್ಟೆಯಲ್ಲಿ ಬೇರೆ ಕೊಬ್ಬರಿ ಕನಿಷ್ಠ 9,800 ಇದ್ದು ಗರಿಷ್ಠ 9,800 ಮಾರಾಟವಾಗಿದೆ. ತಿಪಟೂರು ಮಾರುಕಟ್ಟೆಯಲ್ಲಿ ಕೊಬ್ಬರಿ ಕನಿಷ್ಟ 14,310 ಇದ್ದು 14,310 ಮಾರಾಟವಾಗಿದೆ. ತುಮಕೂರಿನಲ್ಲಿ ಬೇರೆ ವಿಧ ಕನಿಷ್ಠ 10,000 ಇದ್ದು 11,500 ಮಾರಾಟವಾಗಿದೆ. ದಾವಣಗೆರೆ ಮಾರುಕಟ್ಟೆಯಲ್ಲಿ ಕೊಬ್ಬರಿ ಕನಿಷ್ಠ 9,660 ಇದ್ದು 9,660 ಮಾರಾಟವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...