ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಸರ್ಕಾರಿ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಇಂದು ಪ್ರತಿಭಟನೆ ನಡೆಸಿದ್ದರು. ಎಲ್ಲರೂ ಒಟ್ಟಾಗಿ ಒಂದೇ ಸಮಯಕ್ಕೆ ಸರ್ಕಾರಿ ಸೇವೆ ಬಂದ್ ಮಾಡಿದ್ದರು. ಪರೀಕ್ಷೆ ಬೇರೆ ಹತ್ತಿರ ಬರುತ್ತಿದೆ, ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಆಗಿತ್ತು. ಇನ್ನು ಸಮಯವಾದರೆ ಸಮಸ್ಯೆ ದೊಡ್ಡದಾಗುತ್ತೆ ಎಂದು ಅರಿತುಕೊಂಡ ಸಿಎಂ ಬೊಮ್ಮಾಯಿ ಅವರು, ವೇತನ ಹೆಚ್ಚಳಕ್ಕೆ ಅನುಮತಿ ನೀಡಿದ್ದಾರೆ.
ಏಪ್ರಿಲ್ 1ರಿಂದಾನೇ ವೇತನ ಜಾರಿಯಾಗಲಿದೆ ಎಂದು ಆದೇಶ ಹೊರಡಿಸಲಾಗಿದೆ. ಈ ಅಧಿಕೃತ ಆದೇಶದ ಬೆನ್ನಲ್ಲೇ ಸರ್ಕಾರಿ ನೌಕರರು ಮುಷ್ಕರವನ್ನು ವಾಪಾಸ್ ಪಡೆದಿದ್ದಾರೆ. ವಿಧಾನಸಭೆಯಲ್ಲಿ ಸರ್ಕಾರದ ಉನ್ನತ ಅಧಿಕಾರಿಗಳು, ಸಿಎಸ್ ಹಾಗೂ ಒಂಭತ್ತು ಮಂದಿ ಸಚಿವರ ಜೊತೆಗಿನ ಸಭೆ ಬಳಿಕ ಮುಷ್ಕರ ವಾಪಸ್ ಪಡೆದಿದ್ದಾರೆ.
ಬಳಿಕ ಷಡಕ್ಷರಿ ಮಾತನಾಡಿ, ಸರ್ಕಾರ ಶೇಕಡ 17 ರಷ್ಟು ವೇತನ ಹೆಚ್ಚಳ ಮಾಡಿದೆ. ನಾವೂ 25 ರಷ್ಟು ವೇತನ ಹೆಚ್ಚಳ ಕೇಳಿದ್ದೆವು. ಆದ್ರೆ ಸರ್ಕಾರ 17 ರಷ್ಟು ಮಾಡಿದೆ. ಇದನ್ನು ನಾವೂ ಒಪ್ಪಿದ್ದೇವೆ. ಇದನ್ನು ನಾನು ಒಬ್ಬನೇ ತೀರ್ಮಾನ ತೆಗೆದುಕೊಂಡಿಲ್ಲ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್