Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಭೂಮಿಗೆ ತಂಪೆರೆದ ಮಳೆರಾಯ ; ಶೆಕೆಯಿಂದ ಬೆವರಿಳಿಸಿದ ಜನಕ್ಕೆ ಆನಂದ

---Advertisement---

ಹೌದು ಯುಗಾದಿ ಹಬ್ಬಕ್ಕೂ ಮುನ್ನ ಒಂದು ಮಳೆಯಾಗಬೇಕಿದೆ. ಇದು ಅನಾದಿ ಕಾಲದಿಂದಾನೂ ನಡೆದುಕೊಂಡು ಬಂದಿರುವ ಪದ್ಧತಿ. ಪ್ರಕೃತಿಯೇ ಹಾಗೇ ಯಾರೂ ಏನೇ ಬದಲಾದರೂ ತಾನೂ ಮಾತ್ರ ಬದಲಾಗುವುದಿಲ್ಲ. ಆ ಕಾಲ ಕಾಲಕ್ಕೆ ಏನು ಮಾಡಬೇಕೋ ಅದನ್ನೇ ಮಾಡುತ್ತಾ ಹೋಗುತ್ತದೆ. ಇಂದು ಮಳೆ ಕೂಡ. ಹವಮಾನ ಇಲಾಖೆ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂಬ ಸೂಚನೆಯನ್ನು ನೀಡಿತ್ತು. ಇದೀಗ ಸಂಜೆ ವೇಳೆಗೆ ಜೋರು ಮಳೆ ಕಾಣಿಸಿಕೊಂಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಿದೆ. ಮೊದಲೇ ಬೇಸಿಗೆಯ ಬಿಸಿಲು ಜೋರಾಗಿತ್ತು. ಇದರ ನಡುವೆ ವರುಣರಾಯ ತಂಪೆರೆದಿದ್ದಾನೆ. ಸಿಲಿಕಾನ್ ಸಿಟಿಯ ಹೆಬ್ಬಾಳ, ನಾಗವಾರ ಮುಖ್ಯರಸ್ತೆ, ಆರ್.ಟಿ.ನಗರ, ಸುಲ್ತಾನ್ ಪಾಳ್ಯ, ಮಾನ್ಯತಾ ಟೆಕ್ ಪಾರ್ಕ್, ಮೇಖ್ರಿ ಸರ್ಕಲ್, ಸದಾಶಿವನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.

ಸಿಲಿಕಾನ್ ಸಿಟಿಯ ಇನ್ನು ಕೆಲವೆಡೆ ಅಂದ್ರೆ ಟೌನ್ ಹಾಲ್, ಮಾರ್ಕೆಟ್, ಮೆಜೆಸ್ಟಿಕ್, ಯಲಹಂಕ, ಹೆಣ್ಣೂರು, ಟಿನ್ ಫ್ಯಾಕ್ಟರಿ, ಕಲ್ಯಾಣ ನಗರ, ವಿಧಾನಸೌಧ, ಕೆ.ಆರ್.ಸರ್ಕಲ್, ಕಾರ್ಪೋರೇಷನ್, ಜೆಪಿ ನಗರ, ಜಯನಗರ ಭಾಗಗಳಲ್ಲಿ ಕೊಂಚ ಮಳೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ತಣ್ಣನೆಯ ವಾತಾವರಣ ನಿರ್ಮಾಣವಾಗಿದೆ. ಇನ್ನಷ್ಟೇ ಮಳೆ ಬರಬೇಕಿದೆ. ಬೇಸಿಗೆಯ ಬಿಸಿಲಿನಿಂದ ಕಾದಿದ್ದ ಭೂಮಿಗೂ ಮಳೆಯಿಂದ ಹಿತವೆನಿಸಿದೆ. ಫ್ಯಾನ್ ಗಾಳಿಯೂ ಬಿಸಿಯಾಗಿದ್ದ ಈ ಕಾಲಕ್ಕೆ ತಣ್ಣನೆಯ ಬೀಸಿದ ಗಾಳಿಯಿಂದ ಜನ ಕೂಡ ಕೂಲ್ ಆಗಿದ್ದಾರೆ. ನಾಳೆ ಕೂಡ ಮಳೆ ಬರಲಿದೆ ಎಂಬ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ ಹೀಗಾಗಿ ವೀಕೆಂಡ್ ಪ್ಲ್ಯಾನ್ ಮಾಡಿದವರು ಸ್ವಲ್ಪ ಮುಂಹಾಗ್ರತ ಕ್ರಮವನ್ನು ತೆಗೆದುಕೊಳ್ಳಿ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment