Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ, ಬೆಳೆಸುವುದೇ ಮುಂದಿನ ಪೀಳಿಗೆಗೆ ನೀಡುವ ನಿಜವಾದ ಕೊಡುಗೆ : ರೊ.ಈ.ಅರುಣ್‍ಕುಮಾರ್

Facebook
Twitter
Telegram
WhatsApp

 

ಚಿತ್ರದುರ್ಗ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ರೋಟರಿ ಕ್ಲಬ್ ಚಿನ್ಮುಲಾದ್ರಿ ಚಿತ್ರದುರ್ಗ, ನ್ಯಾಷನಲ್ ಹೈವೇ ಪ್ರಾಧಿಕಾರದವರ ಸಹಯೋಗದೊಂದಿಗೆ ಸಸಿ ನೆಡುವ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ಮಲ್ಲಾಪುರದ ಸಮೀಪ ರಿಂಗ್‍ರೋಡ್ ಹೈವೆ ಪಕ್ಕದಲ್ಲಿ ಸಸಿಗಳನ್ನು ನೆಟ್ಟು ಮಾತನಾಡಿದ ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷರಾದ ರೊ.ಈ.ಅರುಣ್‍ಕುಮಾರ್ ಮಾನವನ ದುರಾಸೆಯಿಂದ ಗಿಡ-ಮರಗಳು ನಾಶವಾಗುತ್ತಿರುವುದರಿಂದ ಸಕಲ ಜೀವರಾಶಿಗಳು ತೊಂದರೆ ಅನುಭವಿಸುವಂತಾಗಿದೆ. ಮನುಷ್ಯನ ಉಸಿರಾಟಕ್ಕೆ ಶುದ್ದವಾದ ಗಾಳಿ ಬೇಕಾಗಿರುವುದರಿಂದ ಪ್ರತಿಯೊಬ್ಬರು ಒಂದು ಗಿಡ ನೆಟ್ಟು ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸಿದರೆ ಮುಂದಿನ ಪೀಳಿಗೆಗೆ ನೀಡುವ ನಿಜವಾದ ಕೊಡುಗೆ ಎಂದು ಹೇಳಿದರು.

ಕೆಲವರು ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಮಾಡಿಕೊಳ್ಳುವ ಬದಲು ಒಂದೊಂದು ಗಿಡ ನೆಟ್ಟು ಪರಿಸರವನ್ನು ಉಳಿಸಬೇಕಾಗಿದೆ ಎಂದರು.

ರೋಟರಿ ಕ್ಲಬ್ ಚಿನ್ಮುಲಾದ್ರಿ ಚಿತ್ರದುರ್ಗ ಜಂಟಿ ಕಾರ್ಯದರ್ಶಿ ರೊ.ಶಂಕರಪ್ಪ, ರೊ.ವಿಶಾಲಾಕ್ಷಿ, ರೊ.ಶಿಲ್ಪಾದಿವಾಕರ್, ರೊ.ಲಕ್ಷ್ಮಿಕಾಂತ್, ರೊ.ಇಕ್ಬಾಲ್, ರೊ.ಚೇತನ್, ಹಾಸ್ಯ ಸಾಹಿತಿ ಜಗನಾಥ, ಹರೀಶ್, ಇನ್ನರ್‍ವೀಲ್ಹ್ ಕ್ಲಬ್‍ನ ಸದಸ್ಯರುಗಳು, ನ್ಯಾಷನಲ್ ಹೈವೇ ಬೆಂಗಳೂರು ವಿಭಾಗದ ಚಿತ್ರದುರ್ಗ ಶಾಖೆಯ ಮುಖ್ಯಸ್ಥರು ಸಸಿ ನೆಡುವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!