Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳಿಗೆ ಕೌಶಲ್ಯಾಧಾರಿತ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ : ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.15  : ಮಕ್ಕಳನ್ನು ಕೇವಲ ಪಠ್ಯಪುಸ್ತಕ ಅಂಕಕ್ಕೆ ಸೀಮಿತಗೊಳಿಸದೆ ಜೀವನಕ್ಕೆ ಬೇಕಾಗಿರುವ ಕೌಶಲ್ಯಾಧಾರಿತ ಶಿಕ್ಷಣ ನೀಡುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ಕರೆ ನೀಡಿದರು.

ಮಹಾರಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವೃತ್ತಿ ಶಿಕ್ಷಣ ಕಲಿಕೋತ್ಸವ ಹಾಗೂ ವಸ್ತು ಪ್ರದರ್ಶನ ಉದ್ಗಾಟಿಸಿ ಮಾತನಾಡಿದರು.

ವೃತ್ತಿ ಶಿಕ್ಷಕರು ಮಕ್ಕಳ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ವಿಷಯಾಧಾರಿತ ಶಿಕ್ಷಕರುಗಳಿಗಿರುವಷ್ಟೆ ಗೌರವ, ಜವಾಬ್ದಾರಿ ನಿಮಗೂ ಇರುವುದರಿಂದ ಮಕ್ಕಳನ್ನು ಸ್ವಾವಲಂಭಿಗಳಾಗಿ ಬದುಕುವತ್ತ ಸಿದ್ದಗೊಳಿಸಬೇಕು. ಮಕ್ಕಳ ಮನಸ್ಸು ಅಂಗಾಂಗ ವೃತ್ತಿ ಕೌಶಲ್ಯದ ಕಾರ್ಯವಾಗಬೇಕು. ಕೌಶಲ್ಯ ಶಿಕ್ಷಣದಿಂದ ಮಕ್ಕಳಲ್ಲಿ ಮಾನಸಿಕ ದೈಹಿಕ ಸಾಮಥ್ರ್ಯ ಬೆಳೆಯುತ್ತದೆ. ಕೇವಲ ಗಣಿತ, ವಿಜ್ಞಾನ, ಇಂಗ್ಲಿಷ್ ಭಾಷೆಗಳಲ್ಲದೆ ವೃತ್ತಿ ಶಿಕ್ಷಣ ಕಲಿತ ವಿದ್ಯಾಥಿ9 ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಬಹುದು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಮಾತನಾಡಿ ಗಾಂಧಿಜಿಯವರ ಆಸೆಯಂತೆ ಶಿಕ್ಷಣ ಮತ್ತು ತತ್ವದ ಆಧಾರದ ಮೇಲೆ ವಿದ್ಯಾರ್ಥಿಗಳಲ್ಲಿ ವೃತ್ತಿ ಶಿಕ್ಷಣದ ಕೌಶಲ್ಯಗಳಾದ ತೋಟಗಾರಿಕೆ, ಕೃಷಿ, ಹೊಲಿಗೆ, ರೇಷ್ಮೆಯಂತ ಕೌಶಲಗಳನ್ನು ಬೆಳೆಸಿದರೆ ಟಚ್ ಅಂಡ್ ಫೀಲ್ ಅನುಭವವಾಗುತ್ತದೆ ಎಂದು ತಿಳಿಸಿದರು.

ಶಿಕ್ಷಣಾಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ ಮಾತನಾಡುತ್ತ ವೃತ್ತಿ ಶಿಕ್ಷಣ ಶಿಕ್ಷಕರು ಪಠ್ಯದ ಜೊತೆಗೆ ವೃತ್ತಿ ಶಿಕ್ಷಣಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ತೊಡಗುವಂತೆ ಮಕ್ಕಳನ್ನು ಅಣಿಗೊಳಿಸಿದಾಗ ಮಕ್ಕಳ ಮನಸ್ಸು ಆಹ್ಲಾದಗೊಳ್ಳುತ್ತದೆ ಎಂದರು.

ಡಿ.ವೈ.ಪಿ.ಸಿ. ಸಮಗ್ರ ಶಿಕ್ಷಣ ಕರ್ನಾಟಕ ವೆಂಕಟೇಶಪ್ಪ ಸಿ.ಎಸ್. ಮಾತನಾಡಿ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪಠ್ಯ ಸಹ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾಗಿದ್ದು, ವೃತ್ತಿ ಶಿಕ್ಷಣ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಹುದುಗಿರುವ ಕೌಶಲ್ಯಕ್ಕೆ ಸಾಣೆ ಹಿಡಿಯುವ ಕೆಲಸ ಮಾಡಬೇಕೆಂದರು.

ವೃತ್ತಿ ಶಿಕ್ಷಣ ವಿಷಯ ಪರಿವೀಕ್ಷಕರಾದ ಬಸವರಾಜ್ ಓಲೇಕಾರ್ ಪ್ರಾಸ್ತಾವಿಕವಾಗಿ ಮಾತನಾಡುತ್ತ ನಮ್ಮ ದೇಶ ಕೃಷಿ ಆಧಾರಿತ ಹಳ್ಳಿಗಳಿಂದ ಕೂಡಿದ್ದು, ವಿದ್ಯಾರ್ಥಿಗಳಿಗೆ ಪ್ರಾಥಮಿಕ ಪ್ರೌಢಶಿಕ್ಷಣದ ಹಂತದಲ್ಲಿಯೇ ವೃತ್ತಿ ಶಿಕ್ಷಣದ ಮಾರ್ಗದರ್ಶನವಾಗಬೇಕು. ಇದರಿಂದ ಪ್ರೌಢ ಶಿಕ್ಷಣದ ನಂತರ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ವೃತ್ತಿ ಶಿಕ್ಷಣದ ಮಹತ್ವ ತಿಳಿಸಿದರು.

ವಿಷಯ ಪರಿವೀಕ್ಷಕರುಗಳಾದ ಶ್ರೀಮತಿ ಸವಿತ, ಹೆಚ್.ಗೋವಿಂದಪ್ಪ, ಕೆ.ಶಿವಣ್ಣ, ಹೆಚ್.ಟಿ.ಚಂದ್ರಣ್ಣ, ಜಿಲ್ಲೆಯ ಎಲ್ಲಾ ವೃತ್ತಿ ಶಿಕ್ಷಣ ಶಿಕ್ಷಕರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!