Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಹಾಸನದಲ್ಲಿ ಯಶ್ ಅವರ ತಾಯಿ ಮನೆಗೆ ಕನೆಕ್ಟ್ ಆಗಿದ್ದ ದಾರಿ ಕ್ಲೋಸ್ : ಈಗ ಹೇಗಿದೆ..?

---Advertisement---

ಹಾಸನ: ವಿದ್ಯಾನಗರದಲ್ಲಿ ಇರುವ ಯಶ್ ಅವರ ತಾಯಿಯ ನಿವೇಶನದ ಪಕ್ಕದಲ್ಲಿಯೇ ಹಾಕಲಾಗಿದ್ದ ಕಾಂಪೌಂಡ್ ಅನ್ನು ತೆರವು ಮಾಡಲಾಗಿದೆ. ಹಾಕಿದ್ದ ಶೆಡ್ಡ ಹಾಗೂ ಕಾಂಪೌಂಡ್ ಅನ್ನು ತೆರವು ಮಾಡಲಾಗಿದೆ. ಕಟ್ಟಾಯ ಹೋಬಳಿ ದೋರ್ನಳ್ಳಿ ಗ್ರಾಮದ ದೇವರಾಜು ಎಂಬುವವರು, ಈ ಜಾಗದ ಮೂಲ ಮಾಲೀಕರಾಗಿರುವ ಲಕ್ಷ್ಮಮ್ಮ ಎಂಬುವವರು ತನ್ನ ಹೆಸರಿಗೆ ಜಿಪಿಎ ಮಾಡಿಕೊಟ್ಟಿದ್ದಾರೆ. ಈ ನಿವೇಶನಕ್ಕೆ ಸಂಬಂಧಿಸಿದ ಕೇಸ್ ತನ್ನಂತೆ ಆಗಿದೆ ಎಂದು ನಿನ್ನೆ ಅಕ್ರಮವಾಗಿ ನಿರ್ಮಾಣವಾಗಿದ್ದ ಕಾಂಪೌಂಡ್ ಅನ್ನು ತೆರವು ಮಾಡಿಸಿದ್ದರು.

ಸದ್ಯಕ್ಕೆ ಯಶ್ ಅವರ ತಾಯಿ ಮನೆಗೆ ಹೋಗಬೇಕಿದ್ದ ರಸ್ತೆಯನ್ನ ಕ್ಲೋಸ್ ಮಾಡಿಸಲಾಗಿದೆ. ಅಂದ್ರೆ ಪಕ್ಕದಲ್ಲೂ ಒಂದು ದಾರಿಯನ್ನ ನಿರ್ಮಾಣ ಮಾಡಿಕೊಂಡಿದ್ದರು. ಈಗ ಮನೆಯ ಮುಂದಿನ ದಾರಿ ಮಾತ್ರ ಇದೆ. ಪಕ್ಕದ ದಾರಿಯನ್ನ ಬಂದ್ ಮಾಡಿಸಿ, ತಂತಿ ಬೇಲಿ ಹಾಕಿಕೊಳ್ಳಲಾಗಿದೆ. 1500 ಚದುರ ಅಡಿಯ ಜಾಗವನ್ನ ಒತ್ತುವರಿ ಮಾಡಲಾಗಿತ್ತು. ಹಾಸನ 4ನೇ ಹೆಚ್ಚುವರಿ ಜಿಎಂಎಫ್ ನ್ಯಾಯಾಲಯದಿಂದ ಆದೇಶ ಬಂದಿತ್ತು.

ಕೇಸ್ ದೇವರಾಜ್ ಅವರ ಪರವಾಗಿದ್ದು, ತನ್ನ ಸಂಗಡಿಗರೊಂದಿಗೆ ಬಂದು ತೆರವು ಮಾಡಿದ್ದಾರೆ. ಅತ್ತ ಪುಷ್ಪಾ ಅವರ ಚಿಕ್ಕಮ್ಮನ ಮಗ ಕೂಡ ದೂರು ನೀಡಿದ್ದಾರೆ. ದೇವರಾಜ್ ಗೂ ಈ ಆಸ್ತಿಗೂ ಸಂಬಂಧವಿಲ್ಲ. ನಮಗೆ ಜೀವ ಬೆದರಿಕೆ ಇದೆ. ರಕ್ಷಣೆ ನೀಡಬೇಕೆಂದು ಕೋರಿ ಬಡಾವಣೆ ಠಾಣೆಗೆ ದೂರು ನೀಡಲಾಗಿದೆ. ಎರಡು ಕಡೆಯಿಂದ ದೂರು ಬಂದ ಹಿನ್ನೆಲೆ ಪೊಲೀಸರು ಇಬ್ಬರಿಗೂ ನೋಟೀಸ್ ನೀಡಿದ್ದು, ಗಲಾಟೆ ಮಾಡಿಕೊಳ್ಳದಂತೆ ಎಚ್ಚರಿಕೆವಹಿಸಿದ್ದಾರೆ. ಕೋರ್ಟ್ ಆದೇಶದಂತೆ ನಡೆದುಕೊಳ್ಳಲು ಸೂಚನೆ ನೀಡಿದ್ದಾರೆ‌.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...