in ,

ಆಡಳಿತ ಪಕ್ಷ ಪ್ರಶ್ನೆ ಮಾಡೋಕೆ ಬಿಜೆಪಿಯ ವಿರೋಧ ಪಕ್ಷದಲ್ಲಿ ಕೂರುವುದಕ್ಕೆ ಸಮರ್ಥ ನಾಯಕ ಯಾರು..?

suddione whatsapp group join

 

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬಂದಿದೆ. ಸರ್ಕಾರ ರಚನೆ ಮಾಡುವುದಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ. ಆದರೆ ಬಿಜೆಪಿ ಪಕ್ಷದಲ್ಲಿ ವಿರೊಧ ಪಕ್ಷದ ನಾಯಕನ ಸ್ಥಾನದಲ್ಲಿ ಕುಳಿತುಕೊಳ್ಳಯವವರು ಯಾರು ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

ಯಾಕಂದ್ರೆ ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿ ಯಡಿಯೂರಪ್ಪ ಅವರು ಸಮರ್ಥರಿದ್ದರು. ಆದರೆ ಈಗ ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಸಾಧ್ಯವಿಲ್ಲ. ಇನ್ನು ಬಿಜೆಪಿಯಲ್ಲಿ ಘಟಾನುಘಟಿ ನಾಯಕರೆರ ಸೋಲನ್ನು ಕಂಡಿದ್ದಾರೆ. ಜೆ ಸಿ ಮಾಧುಸ್ವಾಮಿ, ಶ್ರೀರಾಮುಲು, ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರ ಸೋಲು ಬಿಜೆಪಿಗೆ ಅರಗಿಸಿಕೊಳ್ಳಲಾಗದ ತುತ್ತಾಗಿದೆ. ಹೀಗಿರುವಾಗ ವಿರೋಧ ಪಕ್ಷದ ನಾಯಕ ಸ್ಥಾನದಲ್ಲಿ ಕುಳಿತುಕೊಳ್ಳುವವರು ಯಾರು ಎಂಬ ಪ್ರಶ್ನೆ ಎದುರಾಗಿದೆ.

ಕಳೆದ ಬಾರಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿದ್ದುಕೊಂಡು, ಆಡಳಿತವನ್ನು ಸರಿಯಾದ ರೀತಿಯಲ್ಲಿ ಕ್ಲಾಸ್ ತೆಗೆದುಕೊಂಡಿದ್ದರು. ಆದರೆ ಈ ಬಾರಿ ಬಿಜೆಪೊಯಲ್ಲಿ ಯಡಿಯೂರಪ್ಪ ಅವರ ಅನುಪಸ್ಥಿತಿ ಕಾಡಲಿದೆ. ಇದರ ಜೊತೆಗೆ ಎಲ್ಲಾ ಕಡೆಯಿಂದಾನೂ ನೋಡಿದಾಗ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಬಹುದು ಎನ್ನಲಾಗಿದೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಬರದ ನಾಡಾಗಿರುವ ಚಿತ್ರದುರ್ಗ ಬಂಗಾರದ ನಾಡಾಗಿ ಮಾರ್ಪಡಲಿದೆ : ಚಿತ್ರನಟ ದೊಡ್ಡಣ್ಣ

ಲಿಂಗಾಯತ ಶಾಸಕರಲ್ಲಿ ಒಬ್ಬರಿಗೆ ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಪದವಿ ನೀಡಿ : ಮಹೇಶ್