ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಇದೇ ಸೆಪ್ಟೆಂಬರ್ 21 ರ ಭಾನುವಾರ ನಡೆಯಲಿರುವ ಭಾಗಶಃ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ ಎಂದು ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಹಾಗೂ ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ.ಸ್ವಾಮಿ ತಿಳಿಸಿದ್ದಾರೆ.
ಅಂದು ರಾತ್ರಿ 11 ರಿಂದ ಬೆಳಗಿನ ಜಾವ 3.30 ರವರೆಗೆ ಈ ಗ್ರಹಣವು ಸಂಭವಿಸಲಿದ್ದು, ಯಾವುದೇ ರೀತಿಯ ಆಚರಣೆಗಳನ್ನು ನಡೆಸುವುದು ಸೂಕ್ತವಲ್ಲ. ಇದೊಂದು ಆಕಾಶದಲ್ಲಿ ನಡೆಯಲಿರುವ ನೆರಳು ಬೆಳಕಿನ ಆಟವಾಗಿದ್ದು, ಸೂರ್ಯ, ಭೂಮಿಯ ನಡುವೆ ಚಂದ್ರ ಬಂದು ಸೂರ್ಯನನ್ನು ಮರೆ ಮಾಡುವ ಪ್ರಕ್ರಿಯೆ ಅಷ್ಟೆ. ಅದು ಈ ಬಾರಿ ನಡೆಯುವ ಗ್ರಹಣವು ಭಾಗಶಃ ಸೂರ್ಯಗ್ರಹಣ. ಸೂರ್ಯನ ಸ್ವಲ್ಪ ಭಾಗವನ್ನು ಮಾತ್ರ ಚಂದ್ರ ಆವರಿಸುವ ಪ್ರಕ್ರಿಯೆ. ಇದು ಈ ಬಾರಿ ಪೂರ್ವ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಫೆಸಿಫಿಕ್ ಸಾಗರ ಹಾಗೂ ಅಂಟಾರ್ಟಿಕಾದಲ್ಲಿ ನಡೆಯುವುದರಿಂದ ನಾವು ಯಾವುದೇ, ಭಯ, ಆತಂಕಕ್ಕೆ ಒಳಗಾಗುವುದು ಬೇಡ. ಇದರಿಂದ ಜನಸಾಮಾನ್ಯರಿಗೆ, ಪ್ರಾಣಿ ಪಕ್ಷಿಗಳ ಮೇಲೆಯೂ ಪರಿಣಾಮವಿಲ್ಲ. ಮೌಢ್ಯತೆಯನ್ನು ಹೋಗಲಾಡಿಸಿ, ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಲು ಎಚ್.ಎಸ್.ಟಿ.ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್