Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ : ಟ್ರೆಂಡಿಂಗ್ ಆಗ್ತಿದೆ ‘ವಿಷ್ಣುಪ್ರಿಯ’ ಹಾಡು

Facebook
Twitter
Telegram
WhatsApp

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿರುವ ಸಿನಿಮಾ ಅಂದ್ರೆ ಅದು ವಿಷ್ಣುಪ್ರಿಯ. ಕಣ್ಸನ್ನೆ ಹುಡುಗಿಯನ್ನ ನೋಡುವುದಕ್ಕೆ ಕರ್ನಾಟಕದ ಮಂದಿಯೂ ಕಾಯುತ್ತಿದ್ದಾರೆ. ಪಡ್ಡೆಹುಲಿ ಆದ ಮೇಲೆ ಶ್ರೇಯಸ್ ಮತ್ತೊಂದು ಅವತಾರ ನೋಡಲು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಇನ್ನೇನು ಬಿಡಿಗಡೆಯಾಗಿ ಪ್ರೇಕ್ಷಕರ ಆಸೆಗೆ ಮತ್ತಷ್ಟು ಖುಷಿ ನೀಡಲಿರುವ ವಿಷ್ಣುಪ್ರಿಯ ಸದ್ಯ ಹಾಡೊಂದರಿಂದ ಸಿಕ್ಕಾಪಟ್ಟೆ ಸೌಂಡ್ ಮಾಡ್ತಾ ಇದೆ. ಅದರಲ್ಲೂ ಆ ಹಾಡು ಟ್ರೆಂಡಿಂಗ್ ನಲ್ಲಿ ಕೂಡ ಇದೆ.

ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು. ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದಾಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಛಾತಿ ಹೊಂದಿರುವ ಆ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಾ, ಮೆಚ್ಚುಗೆ ಗಳಿಸುತ್ತಾ ಮುಂದುವರೆಯುತ್ತಿದೆ.

ಚಿಗುರು ಚಿಗುರು ಸಮಯ ಹಿತವಾದ ಒಂದು ಮೌನ, ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ… ಎಂಬ ಈ ಹಾಡು ಸಂಗೀತ, ಸಾಹಿತ್ಯ ಹಾಗೂ ದೃಷ್ಯ ಸೇರಿದಂತೆ ಎಲ್ಲ ಕೋನಗಳಲ್ಲಿಯೂ ಸಮ್ಮೋಹಕವಾಗಿದೆ. ಇದಕ್ಕೆ ಸಾಹಿತ್ಯ ಒದಗಿಸಿರುವವರು ಡಾ. ವಿ ನಾಗೇಂದ್ರ ಪ್ರಸಾದ್. ಬಹುಶಃ ಈ ಮೂಲಕ ವರ್ಷಾರಂಭದಲ್ಲಿಯೇ ನವಿರು ಭಾವವೊಂದನ್ನು ನಾಗೇಂದ್ರ ಪ್ರಸಾದ್ ಕೇಳುಗರ ಬೊಗಸೆ ತುಂಬಿಸಿದ್ದಾರೆ. ನಜೀನ್ ಅರ್ಷಾದ್ ಕಂಠಸಿರಿಯಲ್ಲಿ ಈ ಹಾಡು ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಈ ಮೂಲಕ ಕೇರಳದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಕನ್ನಡದಲ್ಲಿಯೂ ಕಮಾಲ್ ಮಾಡಿದ್ದಾರೆ.

ಮತ್ತೆ ಮತ್ತೆ ಕೇಳಿಸಿಕೊಳ್ಳುವ ಗುಣ ಹೊಂದಿರುವ ಈ ಪ್ರೇಮ ಗೀತೆಯ ಪ್ರಭೆಯಲ್ಲಿ ವಿಷ್ಣುಪ್ರಿಯನ ಕ್ರೇಜ್ ಮತ್ತಷ್ಟು ಮಿರುಗುತ್ತಿದೆ. ಈ ವರ್ಷದ ಮೆಲೋಡಿಯಸ್ ಹಾಡೆಂದು ಗುರುತಿಸಿಕೊಳ್ಳುವ ಎಲ್ಲ ಗುಣಗಳೂ ಈ ಚಿಗುರು ಚಿಗುರು ಹಾಡಿಗಿದೆ. ಅಂದಹಾಗೆ, ಇದು ವಿ.ಕೆ ಪ್ರಕಾಶ್ ನಿರ್ದೇಶನದ ಚಿತ್ರ. ತೊಂಬತ್ತರ ದಶಕದಲ್ಲಿ ಘಟಿಸುವ ಈ ಕಥನದಲ್ಲಿ ಶ್ರೇಯಸ್ ಮಂಜು ನಾಯಕನಾಗಿ ನಟಿಸಿದ್ದರೆ, ಒರು ಅಡಾರ್ ಲವ್ ಖ್ಯಾತಿಯ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಈ ಪ್ರೇಮಕಥೆ ಅದೆಷ್ಟು ತಾಜಾತನದಿಂದ ನಳನಳಿಸುತ್ತಿದೆ ಎಂಬುದರ ಸ್ಪಷ್ಟ ಸೂಚನೆಯೊಂದು ಈ ಹಾಡಿನ ಮೂಲಕವೇ ಪ್ರೇಕ್ಷಕರನ್ನು ತಲುಪಿಕೊಂಡಿದೆ.

ಗಂಡುಗಲಿ ಕೆ.ಮಂಜು ನಿರ್ಮಾಣದ ವಿಷ್ಣುಪ್ರಿಯ ಚಿತ್ರದಲ್ಲಿ ಸುಚೇಂದ್ರಪ್ರಸಾದ್, ಅಚ್ಯುತ್ ಕುಮಾರ್ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ಪ್ರೇಮಕಥೆ ಮಾತ್ರವಲ್ಲ; ತೊಂಬತ್ತರ ದಶಕದಲ್ಲಿ ನಡೆದಿದ್ದ ನೈಜ ಕಥನವೂ ಹೌದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

error: Content is protected !!