Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ತಡೆ ನೀಡಿದ ರಾಜ್ಯಸರ್ಕಾರ..!

---Advertisement---

 

ಬೆಂಗಳೂರು: ದೇವಸ್ಥಾನಗಳ ಜೀರ್ಣೋದ್ಧಾರಕ್ಕೆಂದು ನೀಡುತ್ತಿದ್ದ ಅನುದಾನವನ್ನು ತಡೆ ಹಿಡಿಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಮುಖವಾದ ಮೂರು ವಿಷಯಗಳ ಆಧಾರದ ಮೇಲೆ ಅನುದಾನ ತಡೆಹಿಡಿಯಲಾಗಿದೆ.

ಸರ್ಕಾರದಿಂದ ದೇವಾಲಯಗಳ ಅಭಿವೃದ್ಧಿ/ಜೀರ್ಣೋದ್ದಾರಕ್ಕಾಗಿ/ ಸಾಮಾನ್ಯ ಯೋಜನೆ ಅಡಿಯಲ್ಲಿ ಅನುದಾನ ಮುಂಜೂರಾಗಿದೆ. ಈ ಕಾಮಗಾರಿಗಳನ್ನು ಪ್ರಾರಂಭಿಸದೇ ಇರುವ ಸಂಸ್ಥೆಗಳಿಗೆ ಮುಂದಿನ ನಿರ್ದೇಶನದವರೆಗೂ ಹಣ ಬಿಡುಗಡೆ ಮಾಡಬಾರದು.

2022-23ನೇ ಸಾಲಿನಲ್ಲಿ ಮುಂಜೂರಾಗಿರುವ ಅನುದಾನದ ಪೈಕೆ ಈಗಾಗಲೇ ಶೇಕಡಾ 50 ರಷ್ಟು ಹಣ ಬಿಡುಗಡೆಯಾಗಿ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು, ಹಣ ಬಿಡುಗಡೆ ಮಾಡದಿದ್ದಲ್ಲಿ ಸದರಿ ಕಾಮಗಾರಿಗೆ ಹಣವನ್ನು ಬಿಡುಗಡೆ ಮಾಡಬಾರದು. ಹಾಗೂ ಕಾಮಗಾರಿಯನ್ನು ಪ್ರಾರಂಭಿಸದೇ ಇದ್ದಲ್ಲಿ ಕಾಮಗಾರಿಯನ್ನು ಪ್ರಾರಂಭಿಸತಕ್ಕದ್ದಲ್ಲ.

ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸ್ವೀಕೃತವಾಗಿದ್ದಲ್ಲಿ ಆಡಳಿತಾತ್ಮಕ ಮಂಜೂರಾತಿಯನ್ನು ಮುಂದಿನ ನಿರ್ದೇಶನದವರೆಗೆ ತಡೆಹಿಡಿಯುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖೆಯೂ ರಾಜ್ಯ ಸರ್ಕಾರ ಬಳಿ ಈ ಮೂರು ವಿಷಯಗಳನ್ನು ಪ್ರಸ್ತಾಪಿಸಿತ್ತು. ಬಳಿಕ ಜೀರ್ಣೋದ್ಧಾರಕ್ಕೆಂದು ನೀಡುವ ಅನುದಾನವನ್ನು ತಡೆಹಿಡಿಯಲು ಕೇಳಿತ್ತು. ಇದೀಗ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment