ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪ್ರಾರಂಭಿಸುವ ಉದ್ದೇಶ ಹೊಂದಿರುವ ಇಲಾಖೆ ಇದೀಗ ಜ್ಯೋತಿ ಸಂಜೀವಿನಿ ಯೋಜನೆಯನ್ನು ಸ್ಥಗಿತಗೊಳಿಸಿದೆ. ಈ ಸಂಬಂಧ ಅಧಿಕೃತವಾಗಿ ಆದೇಶ ಹೊರಡಿಸಿದೆ. ಆ ಆದೇಶದ ಪ್ರತಿ ಹೀಗಿದೆ ನೋಡಿ,
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರಿಗೆ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉಲ್ಲೇಖಿತ (2) ರನ್ನಯಿ ಅಕ್ಟೋಬರ್ 01. 2025 ಜಾರಿಗೊಳಿಸಲು ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬಂದ ದಿನಾಂಕದಿಂದ ಪ್ರಸ್ತುತ ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆಯು ಸ್ಥಗಿತಗೊಳ್ಳುವುದು ಎಂದು ಸರ್ಕಾರವು ಆದೇಶಿಸಲಾಗಿದೆ. ಅದರಂತೆ ನೊಂದಾಯಿತ ಆಸ್ಪತ್ರೆಗಳಿಗೆ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಲಾಗಿದೆ.

1. ಆಸ್ಪತ್ರೆಗಳು ಈಗಾಗಲೇ ಒಡಂಬಡಿಕೆ (Moll) ಸಲ್ಲಿಸಿರುವ ಹಾಗೂ ಅನುಮೋದನೆಗೊಂಡಿರುವ ಆಸ್ಪತ್ರೆಗಳಲ್ಲಿ, CASS ಫಲಾನುಭವಿಗಳಿಗೆ ನಗದು ರಹಿತ ಚಿಕಿತ್ಸೆಯನ್ನು ನೀಡುವುದು
2. KASS ಯೋಜನೆಯಡಿಯಲ್ಲಿ ನೊಂದಾಯಿಸಲ್ಪಟ್ಟ ಫಲಾನುಭವಿಗಳಿಗೆ ಮಾತ್ರ ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ರೋಗಿಗೆ ಚಿಕಿತ್ಸೆಯನ್ನು ನೀಡಿ KASS ಯೋಜನೆಯಡಿಯಲ್ಲಿ ನೊಂದಾವಣೆ ಮಾಡಿಕೊಳ್ಳಲು 48 ಗಂಟೆಗಳ ಕಾಲಾವಕಾಶ ಕಲ್ಪಿಸಿಕೊಡುವುದು. ಒಂದು ವೇಳೆ 48 ಗಂಟೆಗಳಲ್ಲಿ ನೊಂದಣಿ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ ಯೋಜನೆಯಡಿಯಲ್ಲಿ ಪರಿಗಣಿಸದೇ ಇರುವುದು.
3. ಸು.ಆ.ಸು.ಟ್ರ ತಂತ್ರಾಂಶ ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಮುಂದುವರೆಯುವುದು https/asthmataka govt
4 ದಿನಾಂಕ: 01.10.2025 ರಿಂದ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನಗದು ರಹಿತ ಚಿಕಿತ್ಸೆಗೆ Xowool Pre-authorization ಪಡದಂತಹ (Discharge) ಕ್ರೈಮ್ ಗಳನ್ನು 15 ದಿನಗಳೊಳಗಾಗಿ ನಿಗದಿತ ನಮೂನೆಯಲ್ಲಿ ಸಲ್ಲಿಸುವುದು.





