ರಾಜ್ಯಾದ್ಯಂತ ಇನ್ನೂ 5 ದಿನಗಳ ವರ್ಷಧಾರೆಯ ಮುನ್ಸೂಚನೆ

suddionenews
1 Min Read

ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇನ್ನೂ ಮುಂದಿನ 5 ದಿನಗಳ ಕಾಲ ವರುಣಾರ್ಭಟ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ನಿರಂತರವಾಗಿ ಮುಂದುವರಿದೆ.ಈ ಹಿನ್ನೆಲೆಯಲ್ಲಿ ಜಮೀನು, ಮನೆಗಳಿಗೆ ನೀರು ನುಗ್ಗಿ ಜನರು ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾವಿರಾರು ಎಕರೆ ಬೆಳೆಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಮೈಸೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ರಾಯಚೂರು, ಹುಬ್ಬಳ್ಳಿ ಧಾರವಾಡ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸತತ ಮಳೆಯಾಗುತ್ತಿದೆ ಎಂದು ಇಲಾಖೆ ತಿಳಿಸಿದೆ. ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿ ಪಾತ್ರಗಳಲ್ಲಿರುವ ಮತ್ತು ತಗ್ಗು ಪ್ರದೇಶಗಳಲ್ಲಿರುವ ಕೃಷಿ ಭೂಮಿ ಸಂಪೂರ್ಣ ಜಲಾವೃತವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.


 

Share This Article
Leave a Comment

Leave a Reply

Your email address will not be published. Required fields are marked *