Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಿಂಗಾಯಾತರನ್ನು ಮುಗಿಸುವ ತಂತ್ರ ; ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದೇನು..?

---Advertisement---

ಕೊಪ್ಪಳ; ಜಾತಿ ಗಣತಿ ವರದಿಯ ಅಂಕಿ ಅಂಶಗಳು ಬಹಿರಂಗವಾದೊಡನೆ ಬೆಂಕಿಯ ಜ್ವಾಲೆ ಹಬ್ಬಿದೆ. ಇದೀಗ ಜಯ ಮೃತ್ಯುಂಜಯ ಸ್ವಾಮೀಜಿ ಕೂಡ ಈ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ. ಕಾಂತರಾಜ ವರದಿ ಅವೈಜ್ಞಾನಿಕವಾಗಿ. ಪ್ರಬಲವಾದ ಲಿಂಗಾಯತರ ರಾಜಕೀಯವನ್ನು ಮುಗಿಸಲು ಮಾಡಿರುವ ತಂತ್ರವಿದು ಎಂದು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ವರದಿ ವೈಜ್ಞಾನಿಕವಾಗಿದ್ದರೆ ನಾವೂ ಒಪ್ಪಿಕೊಳ್ಳಬಹುದಿತ್ತು. ಈ ಜಾತಿಗಣತಿ ವರದಿಯನ್ನ ಎಲ್ಲಿಯೋ ಕುಳಿತು ತಯಾರಿಸಿದ್ದಾರೆ. ಸಿದ್ಧಗಂಗಾ ಮಠದ ಸ್ವಾಮಿಗಳು ಕೂಡ ನಮ್ಮ ಮಠಕ್ಕೆ ವರದಿ ಬಂದಿಲ್ಲ ಅಂತ ತಿಳಿಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾದ ನಿರ್ಣಯಕ್ಕೆ ನನ್ನ ಬೆಂಬಲವಿದೆ. ಪಂಚಮಸಾಲಿ ಸಮಾಜವೇ 1.30 ಕೋಟಿ ಜನಸಂಖ್ಯೆ ಇದೆ. ಆದರೆ ಅದನ್ನೇ ಕೇವಲ 16 ಲಕ್ಷ ಎಂದು ತೋರಿಸಿದ್ದಾರೆ. ಸಿದ್ದರಾಮಯ್ಯ ಅವರು ಈ ವರದಿಯನ್ನು ತಿರಸ್ಕರಿಸಬೇಕು. ಮರು ಸಮೀಕ್ಷೆಗೆ ಒಪ್ಪಿಗೆ ನೀಡಬೇಕು ಎಂದಿದ್ದಾರೆ.

ಲಿಂಗಾಯತ ಸಮುದಾಯದ ಶಾಸಕರು ಎಲ್ಲರು ಒಗ್ಗಟ್ಟಾಗಿ ಸಭೆ ನಡೆಸಲಿ. ಈ ವರದಿಯಿಂದ ಸಮಾಜದಲ್ಲಿ ವೈಮನಸ್ಸು ಬೆಳೆಯುತ್ತಿದೆ. ಇದು ಸಮೀಕ್ಷೆ ಗಣತಿ ಅಲ್ಲ. ಈ ವರದಿ ತಿರಸ್ಕರಿಸಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲಿ. ಲಿಂಗಾಯತರು ಒಳಪಂಗಡ ಬಿಟ್ಟು ಒಗ್ಗಟ್ಟಾಗಿರಿ. ಸಮಯ ಬಂದರೆ ಸಚಿವರು, ಶಾಸಕರು ರಾಜೀನಾಮೆ ಕೊಡುವುದಕ್ಕೂ ಸಿದ್ಧರಾಗಿರಿ. ಸಮಾಜಕ್ಕಾಗಿ ನೀವೂ ಧ್ವನಿ ಎತ್ತದೆ ಇದ್ದರೆ ಸಮಾಜ ನಿಮ್ಮನ್ನು ಕ್ಷಮಿಸುವುದಿಲ್ಲ. ನಾಳೆ ಪಕ್ಷದಲ್ಲಿ ಟಿಕೆಟ್ ಕೇಳುವಾಗಲೂ ಜನಸಂಖ್ಯೆ ಮಖ್ಯವಾಗುತ್ತದೆ. ಸಮುದಾಯಕ್ಕೆ ಅನ್ಯಾಯವಾದಾಗ ಧ್ವನಿ ಎತ್ತಬೇಕು ನೀವೆಲ್ಲಾ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಅವರು ಲಿಂಗಾಯತ ಸಮುದಾಯದ ಮಂದಿಗೆ ಕರೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment