Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕು ನೌಕರರ ಸಂಘ ಒತ್ತಾಯ….!

---Advertisement---

ಸುದ್ದಿಒನ್, ಹಿರಿಯೂರು, ಫೆಬ್ರವರಿ.03  : 7ನೇ ವೇತನ ಆಯೋಗದ ವರದಿಯನ್ನು ಶೀಘ್ರ ಯಾಥಾವತ್ತಾಗಿ ಅನುಷ್ಠಾನಗೊಳಿಸಿ ಹಾಗೂ ಎನ್‌ಪಿಎಸ್ ಬದಲು ಓಪಿಎಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕು ನೌಕರರ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಎನ್‌ಪಿಎಸ್ ಯೋಜನೆಯು ಸರ್ಕಾರಿ ನೌಕರರಿಗೆ ಮರಣ ಶಾಸನವಾಗಿದ್ದು ಇದನ್ನು ಕೂಡಲೇ ರದ್ದುಗೊಳಿಸಿ ಓಪಿಎಸ್ ಯೋಜನೆಯನ್ನು ಮರು ಜಾರಿ ಮಾಡಬೇಕು, ಜೊತೆಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು, ಇದಲ್ಲದೆ ನೌಕರರ ಇತರೇ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರನ್ನು ಆಗ್ರಹಿಸಿದರು.

ನೌಕರರ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು ಬರುವ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ರಾಜ್ಯ ನೌಕರರ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಚಿವ ಡಿ ಸುಧಾಕರ್ ಅವರು ಭರವಸೆ ನೀಡಿದರು.


ಆರ್. ಶಿವಕುಮಾರ್, ತಾಲ್ಲೂಕು ಅಧ್ಯಕ್ಷ

7ನೇ ವೇತನ ಆಯೋಗದ ವರದಿಯ ಅವಧಿ ಹೆಚ್ಚುತ್ತಾ ಹೋಗುತ್ತಿದೆ. ಇದರಿಂದ ಸರ್ಕಾರಿ ನೌಕರರ ಬೇಡಿಕೆಗಳಿಗೆ ಬೆಲೆ ಇಲ್ಲದಂತಾಗಿದ್ದು, ನಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಕೂಡಲೇ ಸರ್ಕಾರ ಶೀಘ್ರವಾಗಿ ವರದಿ ಪಡೆದುಕೊಂಡು ಎನ್‌ಪಿಎಸ್ ಬದಲಿಗೆ ಓಪಿಎಸ್ ಯೋಜನೆಯನ್ನು ಮರು ಜಾರಿಗೊಳಿಸುವ ಮೂಲಕ ಸರ್ಕಾರಿ ನೌಕರರ ಕನಸು ನನಸು ಮಾಡಲು ಮುಂದಾಗಬೇಕೆಂದು ಸರ್ಕಾರವನ್ನು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಶಿವಕುಮಾರ್
ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ, ನೌಕರರ ಸಂಘದ ಖಜಾಂಚಿ ಎಚ್. ಕೃಷ್ಣಮೂರ್ತಿ, ಕಾರ್ಯದರ್ಶಿ ಬಿ. ರಮೇಶ್, ರಾಜ್ಯ ಪರಿಷತ್ ಸದಸ್ಯೆ ಎಚ್ ಎಂ. ಯಶೋಧ,  ಸೋಮಶೇಖರ್, ಜಿಎಸ್ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಪ್ರೌಢಶಾಲಾ ಶಿಕ್ಷಕರ ಅಧ್ಯಕ್ಷ ನಾಗನಾಯ್ಕ, ತಿಪ್ಪೇಸ್ವಾಮಿ, ವಿದ್ಯಾಧರ, ಕೆಂಪಣ್ಣ, ಅಶೋಕ್, ರಂಗಸ್ವಾಮಿ, ಲೋಕಮ್ಮ, ರಮೇಶ್ ನಾಯ್ಕ, ವಿನಯ್ ಕುಮಾರ್, ರವಿಕುಮಾರ್, ರಂಗಸ್ವಾಮಿ, ಮಂಜುನಾಥ್, ರಮೇಶ್, ಪ್ರೇಮಲತಾ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...