Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಮ್ಮ ತೊಡೆ ಮುರಿಯುವ ಕಾಲ ದೂರವಿಲ್ಲ : ಡಿಕೆ ಶಿವಕುಮಾರ್ ಅವರಿಗೆ ನಿಖಿಲ್ ಕುಮಾರಸ್ವಾಮಿ ಹಿಂಗ್ಯಾಕಂದ್ರು..?

---Advertisement---

ರಾಮನಗರ: ನಿಖಿಲ್ ಕುಮಾರಸ್ವಾಮಿ ಇತ್ತೀಚೆಗೆ ರಾಜಕಾರಣದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಕಾರ್ಯಕರ್ತರ ಜೊತೆಗೆ ಓಡಾಡುತ್ತಾ, ಪಕ್ಷ ಬಲವರ್ಧನೆ ಮಾಡುವತ್ತ ಗಮನ ಹರಿಸಿದ್ದಾರೆ. ಇದರ ಜೊತೆಗೆ ವಿರೋಧ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬಿಡದಿಯಲ್ಲಿ ಟೌನ್ ಶಿಪ್ ಯೋಜನೆ ವಿರೋಧಿಸಿ ರೈತರಿಗೆ ಬೆಂಬಲ ಸೂಚಿಸಿ, ಬಿಡದಿಯ ಭೈರಮಂಗಲ ಗ್ರಾಮದಲ್ಲಿ ನಡೆದ ಪ್ರತಿಭಟನೆಯಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದರು. ಈ ವೇಳೆ ರೈತರ ಪರವಾಗಿ ಮಾತನಾಡಿದರು. ಸರ್ಕಾರ ಟೌನ್ ಶಿಪ್ ಯೋಜನೆಯನ್ನು ಹಿಂಪಡೆಯದಿದ್ದರೆ ಭೈರಮಂಗಲ ಗ್ರಾಮದಿಂದ ಪಾದಯಾತ್ರೆ ಮಾಡ್ತೇವೆ. ವಿಧಾನಸೌಧಕ್ಕೆ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧವೂ ಹರಿಹಾಯ್ದಿರುವ ನಿಖಿಲ್ ಕುಮಾರಸ್ವಾಮಿ, ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರೂ ರೈತರಿಂದ ಒಂದಿಂಚು ಭೂಮಿಯನ್ನು ಕಸಿದುಕೊಳ್ಳುವುದಕ್ಕೆ ನಾವೂ ಬಿಡುವುದಿಲ್ಲ. ರೈತರ ಮುಂದೆ ತೊಡೆ ತಟ್ಟುವ ಉಪ ಮುಖ್ಯಮಂತ್ರಿಗಳೇ ನಿಮ್ಮ ತೊಡೆ ಮುರಿಯುವ ಕಾಲ ದೂರ ಇಲ್ಲ. ಅವರಿಗೆ ರೈತರ ತಾಕತ್ತಿನ ಬಗ್ಗೆ ಅರಿವಿಲ್ಲ. ರೈತರಿಗೆ ಅಧಿಕಾರ ಕೊಡುವುದೂ ಗೊತ್ತು, ತೊಡೆ ಮುರಿಯುವುದೂ ಗೊತ್ತು. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಈ ಯೋಜನೆಯನ್ನ ಕೈ ಬಿಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಶೇಕಡ 80 ರಷ್ಟು ರೈತರು ಭೂಮಿಯನ್ನು ನೀಡುವುದಿಲ್ಲ. ರೈತರ ಮೇಲೆ ದಿನನಿತ್ಯ ಅಧಿಕಾರಿಗಳ ಮೂಲಕ ದಬ್ಬಾಳಿಕೆ, ದೌರ್ಜನ್ಯ ಮಾಡುತ್ತಿರುವುದು ಯಾವ ಉದ್ದೇಶಕ್ಕೆ ಎಂದು ಪ್ರಶ್ನೆ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...