Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಹಿತ್ಯ ಬಲ್ಲವರು ಸದಸ್ಯರಾದಾಗ ಮಾತ್ರ ಕನ್ನಡ ಸಾಹಿತ್ಯ ಪರಿಷತ್‌ಗೆ ನಿಜವಾದ ಅರ್ಥ : ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

Facebook
Twitter
Telegram
WhatsApp

ವರದಿ : ಸುರೇಶ್ ಪಟ್ಟಣ್

ಚಿತ್ರದುರ್ಗ, (ನ.21) :  ಕನ್ನಡ ಸಾಹಿತ್ಯ ಪರಿಷತ್‌ನ ಬೈಲಾ ತಿದ್ದುಪಡಿಯಾಗಬೇಕು. ಜಿಲ್ಲಾ, ತಾಲ್ಲೂಕು ಮತ್ತು ರಾಜಾಧ್ಯಕ್ಷರನ್ನು ಆಯ್ಕೆ ಮಾಡುವ ಕಾರ್ಯವಾಗಬೇಕಿದೆ ಮತ್ತು ಸಾಹಿತ್ಯದ ಅಭಿವೃದ್ದಿಗೆ ವಿಶೇಷವಾದ ಒತ್ತು ನೀಡಬೇಕಿದೆ ಎಂದು ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಆಭಿಪ್ರಾಯಪಟ್ಟಿದ್ದಾರೆ.

ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ನಡೆದ ಕಸಾಪ ಚುನಾವಣೆಯಲ್ಲಿ ಮತದಾನ ನೇರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಈಗಿನ ಪರಿಷತ್‌ನಲ್ಲಿ ಸಾಹಿತ್ಯ ಬಾರದಿರುವವರು ಸಹ ಇದ್ದಾರೆ. ಇದರಿಂದ ಪರಿಷತ್ ಸಾಹಿತ್ಯ ಪರಿಷತ್ ಆಗುವುದಿಲ್ಲ, ನಿಜವಾದ ಅರ್ಥದಲ್ಲಿ ಪರಿಷತ್ ತನ್ನ ಸದಸ್ಯರನ್ನು ಹೊಂದಬೇಕಿದೆ, ಇದರಲ್ಲಿ ಸಾಹಿತ್ಯಾಸಕ್ತರಿಗಿಂತ ಸಾಹಿತ್ಯವನ್ನು ಬಲ್ಲವರು ಸದಸ್ಯರಾದಾಗ ಮಾತ್ರ ಪರಿಷತ್‌ಗೆ ನಿಜವಾದ ಅರ್ಥ ಬರುತ್ತದೆ ಎಂದು ಶ್ರೀಗಳು ತಿಳಿಸಿದರು.

ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳನ್ನು ಯಾರು ಸಹಾ ನೇರವಾಗಿ ಆಯ್ಕೆ ಮಾಡುವುದಿಲ್ಲ, ಜನರಿಂದ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳು ತಮ್ಮ ನಾಯಕನನ್ನು ಆಯ್ಕೆ ಮಾಡುತ್ತಾರೆ, ಇದೇ ರೀತಿ ಕನ್ನಡ ಸಾಹಿತ್ಯ ಪರಿಷತ್ ನಲ್ಲೂ ಸಹಾ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಈಗಿನಂತೆ ನೇರವಾಗಿ ಮಾಡದೇ ಜಿಲ್ಲಾ ಮತ್ತು ತಾಲ್ಲೂಕು ಆಧ್ಯಕ್ಷರು ಆಯ್ಕೆ ಮಾಡುವ ರೀತಿಯಲ್ಲಿ ಮುಂಬರುವ ನೂತನ ಕಾರ್ಯಕಾರಿ ಸಮಿತಿ ತನ್ನ ಬೈಲಾವನ್ನು ತಿದ್ದುಪಡಿ ಮಾಡುವಂತೆ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಆಗ್ರಹಿಸಿದರು.
ಪರಿಷತ್ ಚುನಾವಣೆಗಳು ಸಾಮಾನ್ಯ ಚುನಾವಣೆಯಂತೆ ಮಾರ್ಪಾಟಾಗಿದೆ.

ಇಲ್ಲಿಯೂ ಸಹಾ ಚುನಾವಣೆಯನ್ನು ನಡೆಸಲಿ ಲಕ್ಷಾಂತರ ರೂ.ಗಳನ್ನು ವ್ಯಯ ಮಾಡಬೇಕಾಗಿದೆ, ಇದರಿಂದ ಪರಿಷತ್ ಚುನಾವಣೆಗೂ ಸಾಮಾನ್ಯ ಚುನಾವಣೆಗೂ ಯಾವುದೇ ರೀತಿಯ ವ್ಯತ್ಯಾಸ ಕಾಣುತ್ತಿಲ್ಲ ಇದರಿಂದ ಚುನಾವಣೆಗೆ ಖರ್ಚು ಮಾಡುವ ಹಣವನ್ನು ಸಾಹಿತ್ಯ ಪ್ರಕಟಣೆ ಮಾಡುವಲ್ಲಿ ವ್ಯಯ ಮಾಡಬಹುದಾಗಿದೆ. ಹಿಂದೇ ಈ ರೀತಿಯಾಗಿ ಇರಲಿಲ್ಲ. ರಾಜಕೀಯದಲ್ಲಿ ನಡೆಯುವುದೇ ಇಲ್ಲಿ ನಡೆಯುತ್ತಿದೆ ಇದು ದುರಾದೃಷ್ಟಕರ ಎಂದು ಶ್ರೀಗಳು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!