Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಅವೈಜ್ಞಾನಿಕಾಗಿ ನಿರ್ಮಿಸಿದ್ದ ಡಿವೈಡರ್ ತೆರವಿಗೆ ಕೂಡಿಬಂದ ಕಾಲ…!

---Advertisement---

ಸುದ್ದಿಒನ್, ಚಿತ್ರದುರ್ಗ, ಫೆ.10 : ನಗರದಲ್ಲಿ ಬಾರೀ ಚರ್ಚೆಗೆ ಗ್ರಾಸವಾಗಿದ್ದ ಅವೈಜ್ಞಾನಿಕ ಡಿವೈಡರ್ ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಶುಕ್ರವಾರ ರಾತ್ರಿ ಚಾಲನೆ ನೀಡಿದರು. 

ಆರ್‌ಟಿಒ ಕಚೇರಿಯ ಮುಂಭಾಗ

ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಯೂನಿಯನ್ ಟಾಕೀಸ್ ಮುಂಭಾಗದಿಂದ ಗಾಂಧಿ ವೃತ್ತದವರೆಗೂ ಇರುವ ಒನ್‍ವೇ ರಸ್ತೆ, ಜೆಸಿಆರ್ ಬಡಾವಣೆ ಮಾರ್ಗದ ಸಾಯಿಬಾಬಾ ಮಂದಿರದ ಬಳಿ, ವಿಪಿ ಬಡಾವಣೆಯ ಬಳಿ, ಹಾಗೂ ಆರ್‌ಟಿಒ ಕಚೇರಿಯ ಬಳಿ ಸೇರಿದಂತೆ ಒಟ್ಟು 6 ಕಡೆ ಅವೈಜ್ಞಾನಿಕ ಡಿವೈಡರ್ ಗಳನ್ನು ತೆರವುಗೊಳಿಸಲಾಗಿದೆ.

ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಗಾಂಧಿ ವೃತ್ತ

ಈ ಅವೈಜ್ಞಾನಿಕ ಡಿವೈಡರ್ ಗಳನ್ನು ತೆರವುಗೊಳಿಸಲು ಶಾಸಕ ವೀರೇಂದ್ರ ಅವರು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದರು ಮತ್ತು ಬೆಳಗಾವಿ ಅಧಿವೇಶನದಲ್ಲಿಯೂ ಈ ಕುರಿತು ಧ್ವನಿ ಎತ್ತಿದ್ದರು. ನಂತರ ಜಿಲ್ಲಾಧಿಕಾರಿಗಳು, ಪಿಡಬ್ಲುಡಿ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿ, ನಗರಸಭೆ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದ್ದರು.ಇದಲ್ಲದೆ ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕರು ಅನಾವಶ್ಯಕ ಡಿವೈಡರ್‍ಗಳನ್ನು ತೆರವುಗೊಳಿಸಬೇಕು ಎಂದು ಮನವಿ ಮಾಡಿದ್ದರು.

ಜೆಸಿಆರ್ ಬಡಾವಣೆಯ ಮುಖ್ಯ ರಸ್ತೆ 

ಅಷ್ಟೇ ಅಲ್ಲದೇ ಕೆಡಿಪಿ ಸಭೆಯಲ್ಲಿಯೂ ಈ ಕುರಿತು ಚರ್ಚಿಸಲಾಗಿತ್ತು. ನಗರದಲ್ಲಿ ನಿರ್ಮಿಸಿರುವ ಡಿವೈಡರ್‍ಗಳನ್ನು ತೆರವುಗೊಳಿಸುವ ಬಗ್ಗೆ ವಿಚಕ್ಷಣದಳ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದರು. ಪರಿವೀಕ್ಷಣಾ ವರದಿ ನಂತರ ವರದಿಯಲ್ಲಿ ಸೂಚಿಸಿರುವಂತೆ ಡಿವೈಡರ್ ತೆರವುಗೊಳಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಈ ಹಿಂದೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ‌ಅದರಂತೆ ನಗರದಲ್ಲಿ 6 ಕಡೆ ಡಿವೈಡರ್ ಗಳನ್ನು ತೆರವುಗೊಳಿಸಿದ್ದಾರೆ. ಇದರಿಂದಾಗಿ ನಗರದಲ್ಲಿ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಈ ಅವೈಜ್ಞಾನಿಕ ಡಿವೈಡರ್ ಗಳ ನಿರ್ಮಾಣ ಸಂದರ್ಭದಲ್ಲಿಯೂ ಕೂಡ ಕೆಲವೆಡೆ‌ ಜನ, ವಾಹನಗಳು ಸಂಚರಿಸದ ಕಾರಾಗೃಹ ರಸ್ತೆಯಲ್ಲೂ ವಿಭಜಕ ನಿರ್ಮಿಸಲಾಗಿದೆ. ಇಲ್ಲಿ ಅಗತ್ಯವಿರಲಿಲ್ಲ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು. ಈ ರೀತಿಯ ಡಿವೈಡರ್ ಗಳು ನಿರ್ಮಿಸುವ ಅಗತ್ಯವೇ ಇರಲಿಲ್ಲ ಎಂದು  ಕೆಲವು ಸಂಘಟನೆಗಳು ಈ ಹಿಂದೆ ಬೀದಿಗಿಳಿದು ಪ್ರತಿಭಟನೆ ಕೂಡ ನಡೆಸಿದ್ದವು.

ಅಕ್ಟೋಬರ್ 25, 2022 ರಲ್ಲಿ ನಗರದ ಹೃದಯ ಭಾಗದಲ್ಲಿರುವ ಪ್ರವಾಸಿ ಮಂದಿರ ಬಳಿ ತಡರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಮೂವರು ಸಾವನ್ನಪ್ಪಿದ್ದನ್ನು ಸ್ಮರಿಸಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...