Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ರೇಣುಕಾಸ್ವಾಮಿಗೆ ದರ್ಶನ್ ಕಡೆಯವರು ಕೊಟ್ಟ ಹಿಂಸೆ ಅಷ್ಟಿಷ್ಟಲ್ಲ

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು, ಜೂ. 11: ಪವಿತ್ರಾ ಗೌಡಗೆ ಅಸಭ್ಯವಾಗಿ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಇಂದು ವ್ಯಕ್ತಿಯೊಬ್ಬ ಶವವಾಗಿ ಬಿದ್ದಿದ್ದಾನೆ. ಆತ ಮಧ್ಯಮವರ್ಗದಿಂದ ಬಂದವನು. ಕಳೆದ ವರ್ಷವಷ್ಟೇ ಮದುವೆಯಾಗಿ, ಕೊನೆಯವರೆಗೂ ಜೊತೆಗೆ ಇರುತ್ತೀನಿ ಎಂದು ಮಾತು ಕೊಟ್ಟವ, ಗರ್ಭಿಣಿಯನ್ನು ಬಿಟ್ಟು ಹೊರಟೆ ಹೋಗಿದ್ದಾನೆ. ಅಷ್ಟಕ್ಕೂ ಆತನಿಂದ ಕೆಟ್ಟದಾಗಿ ಮೆಸೇಜ್ ಗಳು ಬರುತ್ತಿದ್ದರೆ, ಪವಿತ್ರಾ ಗೌಡ ಪೊಲೀಸರಿಗಾದರೂ ದೂರು ನೀಡಬಹುದಿತ್ತು. ಆದರೆ ಒಳ್ಳೆ ಸಿನಿಮಾದಲ್ಲಿ ನಡೆದಂತೆ ಪವಿತ್ರಾಗೌಡ ಈ ವಿಚಾರವನ್ನು ದರ್ಶನ್ ಗೆ ಹೇಳಿದ್ದು, ಎಚ್ಚರಿಕೆ ಕೊಡುವುದಕ್ಕೆ ಕರೆಸಿ, ಹೊಡೆದ ಒಡೆತಕ್ಕೆ ಸತ್ತೆ ಹೋಗುವುದು. ಈ ಎಲ್ಲವೂ ಸಿನಿಮಾದ ದೃಶ್ಯವೆಂಬಂತೆ ಕಣ್ಣಿಗೆ ಕಂಡಿದೆ.

ಸದ್ಯ ಈ ಪ್ರಕರಣದಲ್ಲಿ ಈಗಾಗಲೇ ಹತ್ತು ಜನರನ್ನು ಬಂಧಿಸಲಾಗಿದೆ. ಆದರೆ ರೇಣುಕಾ ಸ್ವಾಮಿಯನ್ನು ಕೊಲ್ಲುವಾಗ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಮುಖ, ತಲೆ, ಕಿವಿಗೆ ತೀವ್ರವಾದ ಗಾಯ ಮಾಡಿದ್ದಾರೆ. ಅಮಾನೀಯವಾಗಿ ಹೊಡೆದು ಕೊಲ್ಲಲಾಗಿದೆ. ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿಕೊಂಡು ವಿನಯ್ ಅವರಿಗೆ ಸಂಬಂಧಪಟ್ಟಂತ ಶೆಡ್ ನಲ್ಲಿ ಕೂಡಿ ಹಾಕಲಾಗಿತ್ತಂತೆ. ಈ ವೇಳೆ ಮುಖದ ಮೂಳೆ ಮುರಿದಿದೆ, ಮೂಗು ಓಪನ್ ಆಗುವಂತೆ ಗುದ್ದಿದ್ದಾರೆ. ಎದೆಯ ಎಡಗಡೆ ರಿಬ್ ಕಟ್ ಆಗುವಂತೆ ಹಲ್ಲೆ ಮಾಡಿದ್ದಾರೆ. ಕಾಲು ಮತ್ತು ಕೈಗೆ ಬ್ಯಾಟ್, ದೊಣ್ಣೆಯಿಂದ ಹೊಡೆಯಲಾಗಿದೆ. ಕಾಲಿನಿಂದ ಮರ್ಮಾಂಗವನ್ನೇ ತುಳಿದಿದ್ದಾರೆ. ರಾಕ್ಷಸರ ರೀತಿ ರೇಣುಕಾಸ್ವಾಮಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕೂಡಿ ಹಾಕಿ ಮನಸ್ಸೋ ಇಚ್ಛೆ ತಳಿಸಿ, ರಾಕ್ಷಸರ ರೀತಿ ನಡೆದುಕೊಂಡಿದ್ದಾರೆ. ಇವರು ಹೊಡೆದ ಹೊಡೆತಕ್ಕೆ ರೇಣುಕಾ ಸ್ವಾಮಿ ನರಳಿ ನರಳಿ ಸತ್ತಿದ್ದಾರೆ. ಸದ್ಯ ಅವರ ಕುಟುಂಬಸ್ಥರನ್ನು ಬೆಂಗಳೂರಿಗೆ ಕರೆಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

error: Content is protected !!