Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

KRS ಡ್ಯಾಂನಲ್ಲಿ ದಿನೇ ದಿನೇ ಇಳಿಮುಖವಾಗ್ತಿದೆ ನೀರು : ಇಂದಿನ ಮಟ್ಟ ಎಷ್ಟಿದೆ ಗೊತ್ತಾ..?

---Advertisement---

 

ಮಂಡ್ಯ: ವಾಡಿಕೆಯಂತೆ ಮಳೆ ಬಂದಿದ್ದರೆ ರಾಜ್ಯದ ಎಲ್ಲಾ ಡ್ಯಾಂಗಳು ತುಂಬಬೇಕಿತ್ತು. ಆದರೆ ಮಳೆ ಕಾಣದಂತೆ ಮಾಯಾವಾಗಿದೆ. ಹೀಗಾಗಿ ಕೃಷಿಗೆ ಇರಲಿ ಕುಡಿಯುವ ನೀರಿಗೂ ಹಾಹಾಕಾರದ ಭಯ ಶುರುವಾಗಿದೆ. ಅದರಲ್ಲೂ ಕಾವೇರಿ ನೀರು ಕಡಿಮೆಯಾದರೆ ಇಡೀ ಬೆಂಗಳೂರಿನ ಜನತೆ ನೀರಿನ ಸಮಸ್ಯೆ ಎದುರಿಸುತ್ತಾರೆ. ಮಳೆಯಿಲ್ಲದೆ ಕಾವೇರಿಯಲ್ಲಿ ದಿನೇ ದಿನೇ‌ ನೀರು ಕಡಿಮೆಯಾಗುತ್ತಲೆ ಇದೆ.

 

ಒಂದು ಕಡೆ ಕರ್ನಾಟಕದಲ್ಲಿಯೇ ಮಳೆ ಇಲ್ಲ. ಆದರೆ ತಮಿಳುನಾಡಿಗೆ ಮಾತ್ರ ಬಿಡಬೇಕಾದ ಕಾವೇರಿ ನೀರನ್ನು ಸರ್ಕಾರ ಬಿಡುತ್ತಲೇ ಇದೆ. ಇದು ಮಂಡ್ಯ ಭಾಗದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯಕ್ಕೆ ಕೆಆರ್ಎಸ್ ಡ್ಯಾಂನಲ್ಲಿ ಇಂದಿನ ನೀರಿನ ಮಟ್ಟ, 21 ಟಿಎಂಸಿ ನೀರು ಮಾತ್ರ ಇದೆ. ಅದರಲ್ಲಿ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ. ಹೀಗಾಗಿ ಬಳಕೆಗೆ 16 ಟಿಎಂಸಿ ನೀರು ಮಾತ್ರ ಇದೆ.

ಈ ಸಂಬಂಧ‌ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಕರೆಯಲಾಗಿದೆ. ಹೀಗಾಗಿ ಮಂಡ್ಯ ರೈತರ ಕಣ್ಣು ಇಂದಿನ ಸಭೆಯ ಮೇಲೆ ಇದೆ. ತಮಿಳುನಾಡಿಗೆ ನೀರು ಬಿಡುತ್ತಾ ಹೋದರೆ ಖಂಡಿತಾ ರಾಜ್ಯದ ಜನತೆಗೆ ಕುಡಿಯುವ ನೀರಿನ ಸಮಸ್ಯೆಯೂ ಉಂಟಾಗುತ್ತದೆ. ಹೀಗಾಗಿಯೇ ರಾಜ್ಯ ಸರ್ಕಾರದ ಮೇಲೆ ರೈತರು ನೀರು ಬಿಡದಂತೆ ಒತ್ತಡ ಹಾಕುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...