Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುನಿರತ್ನಗೆ ಹೊಸ‌ಹೆಸರು ನಾಮಕರಣ‌ ಮಾಡಿದ ಮಹಿಳೆಯರು..?

---Advertisement---

ಬೆಂಗಳೂರು: ದಲಿತರ ಬಗ್ಗೆ ಹಾಗೂ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ ಆಡಿಯೋ ವೈರಲ್ ಆದ ಬೆನ್ನಲ್ಲೇ ಶಾಸಕ ಮುನಿರತ್ನ ಅವರನ್ನ ಅರೆಸ್ಟ್ ಮಾಡಲಾಗಿದೆ. ಈಗಾಗಲೇ ಬಿಜೆಪಿಯ ಶಿಸ್ತು ಸಮಿತಿ ಕೂಡ ನೋಟೀಸ್ ನೀಡಿದೆ. ಆ ರೀತಿಯ ಪದ ಬಳಕೆ ಮಾಡಿದ್ದಕ್ಕೆ ವಿವರಣೆ ಕೇಳಿದೆ. ಇದೀಗ ಕಾಂಗ್ರೆಸ್ ನ ಮಹಿಳಾ ನಾಯಕಿಯರು ಇಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮುನಿರತ್ನ ಅವರಿಗೆ ಹೊಸದೊಂದು ಹೆಸರಿಟ್ಟಿದ್ದಾರೆ.


ನಾಮಫಲಕಗಳನ್ನ ಹಿಡಿದು ಇಂದು ಕೆಪಿಸಿಸಿ ಕಚೇರು ಎದುರು ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ಆಕ್ರೋಶಗೊಂಡ ಮಹಿಳೆಯರು ’30 ಪರ್ಸೆಂಟ್ ಮನಿ ರತ್ನ’ ಎಂದು ಘೋಷಣೆಗಳನ್ನ ಕೂಗಿದ್ದಾರೆ. ಈ ಮೂಲಕ ಪರ್ಸೆಂಟ್ ಮನಿ ರತ್ನ ಎಂಬ ಹೆಸರನ್ನ ನಾಮಕರಣ ಮಾಡಿದ್ದಾರೆ. ದಲಿತರು ಹಾಗೂ ಒಕ್ಕಲಿಗ ಹೆಣ್ಣು ಮಕ್ಕಳ ಬಗ್ಗೆ ತುಚ್ಛವಾಗಿ ಮಾತನಾಡಿದ ಮುನಿರತ್ನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

 

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಮುನಿರತ್ನ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆಗಳು ನಡೆದವು. ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರು, ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸುವ ಜೊತೆಗೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ದಲಿತ, ಒಕ್ಕಲಿಗ ಮಹಿಳೆಯರ ಪರವಾಗಿ ಪೋಲಿಸ್ ಕಚೇರಿಗೆ ತೆರಳಿ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕಾಗಿ ಮನವಿ ಕೂಡ ಸಲ್ಲಿಸಿದರು. ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸೌಮ್ಯಾರೆಡ್ಡಿ ಎಐಸಿಸಿಯ ಶಿಲ್ಪಾ ಅರೋರಾ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment