Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಂಗಭೂಮಿ ಸದಾ ಹರಿಯವ ನದಿಯಿದ್ದಂತೆ, ಎಷ್ಟೇ ಆಧುನಿಕತೆ ಕಡೆಗೆ ಸಾಗಿದರೂ ತನ್ನ ಅಸ್ಥಿತ್ವವನ್ನು ಉಳಿಸಿಕೊಂಡೇ ಬರುತ್ತಿದೆ : ಡಾ.ಕೆ.ಎಂ.ವೀರೇಶ್

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.27 :  ತಾನಲ್ಲದ ಪಾತ್ರವನ್ನು ಪ್ರತಿನಿಧಿಸುವವನೆ ನಿಜವಾದ ನಟ, ಒಬ್ಬ ನಟ ತನ್ನ ಪಾತ್ರದ ಮೂಲಕ ಸಮಾಜ ಬದಲಾವಣೆಗೆ ಕಾರಣನಾಗಬಲ್ಲ ಎಂದು ಎಂದು ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸೃತ ಹಾಗೂ ಹಿರಿಯ ಕಲಾವಿದ ಜಂಬೂನಾಥ್ ಹೇಳಿದರು.

ತಾಲ್ಲೂಕಿನ ಮಲ್ಲಾಪುರ ಗ್ರಾಮದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿ ಬುಧವಾರ ಬಾದರದಿನ್ನಿ ಆಟ್ರ್ಸ್ ಅಕಾಡೆಮಿ, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿ ವರ್ಷ ಮಾರ್ಚ್ 27ರಂದು ಜಗತ್ತಿನ ಒಬ್ಬ ಶ್ರೇಷ್ಠ ನಾಟಕಕಾರ, ಕಲಾವಿದ ರಂಗ ಸಂದೇಶವನ್ನು ನೀಡುತ್ತಾರೆ. ಆ ರಂಗ ಸಂದೇಶವನ್ನು ನಾವು ಪಾಲಿಕೊಂಡು ಹೋಗಬೇಕು. ಅದರಲ್ಲಿರುವ ಸಾರವನ್ನು ಅರ್ಥ ಮಾಡಿಕೊಂಡು ಅಳವಡಿಸಿಕೊಳ್ಳಬೇಕು. ಗಿರೀಶ್ ಕಾರ್ನಾಡ್, ಅಶೋಕ ಬಾದರದಿನ್ನಿ, ಗುಬ್ಬಿ ವಿರಣ್ಣ, ಬಿ.ವಿ.ಕಾರಂತ, ಪ್ರಸನ ಇನ್ನೂ ಮುಂತಾದ ರಂಗಕರ್ಮಿಗಳು ನಮ್ಮ ನಾಡಿನ ರಂಗಭೂಮಿಯನ್ನು ಶ್ರೀಮಂತಗೊಳ್ಳಿಸಿದ್ದಾರೆ. ಇಂದು ಮುಖ್ಯವಾಗಿ ಮಕ್ಕಳಲ್ಲಿ ರಂಗಭೂಮಿಯ ಬಗ್ಗೆ ಆಸಕ್ತಿ ಮೂಡುವಂತೆ ಪೋಷಕರು ಮಾಡಬೇಕು ಎಂದರು.

ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಮಾತನಾಡಿ, ರಂಗಭೂಮಿ ಸದಾ ಹರಿಯವ ನದಿ ಇದ್ದ ಹಾಗೆ ನಾವು ಎಷ್ಟೇ ಆಧುನಿಕತೆ ಕಡೆಗೆ ಸಾಗಿದರು ರಂಗಭೂಮಿ ಮಾತ್ರ ತನ್ನ ಅಸ್ಥಿತ್ವವನ್ನು ಉಳಿಸಿಕೊಂಡು ಬರುತ್ತಿದೆ. ಶಿಕ್ಷಕರಾಗುವವರು ತಮ್ಮ ಪಾಠದಲ್ಲಿ ಧ್ವನಿಯ ಏರಿಳಿತ ಹಾಗೂ ಹಾವಭಾವಗಳ ಕಡೆ ಹೆಚ್ಚು ಗಮನ ಹರಿಸಿ ಪಾಠ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಿ ಬೋಧನೆ ಮಾಡಬಹುದು.

ಪ್ರತಿಯೊಬ್ಬ ಶಿಕ್ಷಕನಲ್ಲಿ ಒಬ್ಬ ಕಲಾವಿದ ಅಡಗಿರುತ್ತಾನೆ ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಒಂದು ಕಾಲದಲ್ಲಿ ನಾಟಕಗಳ ಪ್ರದರ್ಶನವಾದರೆ ಹೆಚ್ಚಿನ ಜನ ಸೇರುತ್ತಿದ್ದರು ಇತ್ತೀಚಿನ ದಿನಗಳಲ್ಲಿ ನಾಟಕಗಳು ಪ್ರೇಕ್ಷಕರ ಕೋರತೆಯನ್ನು ಕಾಣುತ್ತಿದೆ. ಆದಷ್ಟು ಜನ ನಾಟಕಗಳನ್ನು ನೋಡುವಂತಾಗಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ರಂಗ ಕಲಾವಿದ ರಚನಾ ಮಂಜಣ್ಣ ಹಾಗೂ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು. ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಜ್ಯೋತಿ ಬಾದರದಿನ್ನಿ ಅವರು ನಾರ್ವೆ ದೇಶದ ಜಾನ್ ಪೋಸ್ಸೇ ಅವರು ನೀಡಿರುವ ಈ ವರ್ಷದ ರಂಗ ಸಂದೇಶವನ್ನು ವಾಚಿಸಿದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಪ್ರೊ.ಎಂ.ಆರ್. ಜಯಲಕ್ಷ್ಮಿ, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಉಪಪ್ರಾಚಾರ್ಯ ಎಚ್.ಎನ್.ಶಿವಕುಮಾರ, ಉಪನ್ಯಾಸಕ ಡಾ.ಹನುಮಂತ ರೆಡ್ಡಿ, ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಅಧ್ಯಕ್ಷೆ ಅನಸೂಯಾ ಬಾದರದಿನ್ನಿ, ಕಾರ್ಯದರ್ಶಿ ಪ್ರಕಾಶ್ ಬಾದರದಿನ್ನಿ, ಕಲಾವಿದರಾದ ಗುರುಕಿರಣ, ರಾಘವೇಂದ್ರ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ : ಕೇಳಿದ್ದು ಎಷ್ಟು ಕೋಟಿ, ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಹಣ ಬಿಡುಗಡೆ

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

error: Content is protected !!