ಶಿಕ್ಷಣದಲ್ಲಿ ರಂಗಕಲೆ : ನಾಳೆ ಒಂದು ದಿನದ ಕಾರ್ಯಾಗಾರ

1 Min Read

 

ಸುದ್ದಿಒನ್,ಚಿತ್ರದುರ್ಗ, ಏಪ್ರಿಲ್. 14 : ನಗರದ ಕೋಟೆ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ರಂಗಸೌರಭ ಕಲಾ ಸಂಘ, ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ಶಿಕ್ಷಣದಲ್ಲಿ ರಂಗಕಲೆ (ಆಂಗಿಕ, ವಾಚಿಕ, ಆಹಾರ್ಯ, ಸಾತ್ವಿಕ ಅಭಿನಯ ಹಾಗೂ ನವರಸ) ರಂಗಭೂಮಿ ಕಾರ್ಯಾಗಾರದ ಕಾರ್ಯಕ್ರಮವನ್ನು ದಿನಾಂಕ 16-04-2025ನೇ ಬುಧವಾರ ಬೆಳಿಗ್ಗೆ 10-30ಕ್ಕೆ ಏರ್ಪಡಿಸಲಾಗಿದೆ.

ಆಹಾರ ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ಜಿ.ಬಸವರಾಜಪ್ಪ ಅಧ್ಯಕ್ಷತೆ ವಹಿಸುವರು. ರಂಗವಿಮರ್ಶಕ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ವಿ.ಬಸವರಾಜ್ ಪ್ರಶಿಕ್ಷಣಾರ್ಥಿಗಳಿಗೆ ರಂಗಭೂಮಿ ಅವಶ್ಯಕತೆ ಕುರಿತು ಉಪನ್ಯಾಸ ನೀಡಲಿದ್ದಾರೆ.
ಉಪನ್ಯಾಸಕರಾದ ಡಾ.ಕೆ.ಮೋಹನ್‍ಕುಮಾರ್, ಬಿ.ಎಸ್.ನಟರಾಜ್, ಸುದರ್ಶನ್ ಹಾಗೂ ಎಮ್.ಸ್ವಾತಿ, ಯೋಗಶಿಕ್ಷಕ ಎಂ.ಬಿ.ಮುರುಳಿ ಮುಂತಾದವರು ಮುಖ್ಯಅತಿಥಿಯಾಗಿ ಉಪಸ್ಥಿತರಿರುವರು. ರಂಗ ಕಾರ್ಯಾಗಾರ ಸಂಪನ್ಮೂಲ ವ್ಯಕ್ತಿಯಾಗಿ ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ದ್ವಿತೀಯ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಪಠ್ಯಾಧಾರಿತ ಪ್ರಾಯೋಗಿಕ ರಂಗ ತರಬೇತಿ ನೀಡಲಿದ್ದಾರೆ ಎಂದು ರಂಗಸೌರಭ ಕಲಾ ಸಂಘದ ನಿರ್ದೇಶಕ ಪಿ.ಎನ್.ಗಿರೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks