Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

Facebook
Twitter
Telegram
WhatsApp

 

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಅರೇಕಾ ಸಂಶೋಧನಾ ಕೇಂದ್ರವು ನಡೆಸಿದ ವಿಶ್ಲೇಷಣೆಯಲ್ಲಿ ತೀರ್ಥಹಳ್ಳಿ ಅಡಿಕೆ ಕರ್ನಾಟಕದಲ್ಲಿ ಬೆಳೆಯುವ ತಳಿಗಳಲ್ಲಿ ಗುಣಮಟ್ಟದ ಅಡಿಕೆಯಾಗಿ ಹೊರಹೊಮ್ಮಿದೆ.

ಇತ್ತಿಚೆಗೆ ಕೇಂದ್ರದ ವಿಜ್ಞಾನಿಗಳು ವಿವಿಧ ಸ್ಥಳಗಳಲ್ಲಿ ಬೆಳೆದ ಅಡಿಕೆ ಪ್ರಭೇಧಗಳನ್ನು 60 ಜನರ ಗುಂಪಿಗೆ ತೋರಿಸಿದ್ದಾರೆ. ಗ್ರಾಹಕರು, ವ್ಯಾಪಾರಿಗಳು, ಸಂಶೋಧನಾ ವಿದ್ವಾಂಸರು, ವಿಜ್ಞಾನಿಗಳು ಮತ್ತು ಬೆಳೆಗಾರರನ್ನು ಒಳಗೊಂಡ ಗುಂಪು ವಿಶ್ಲೇಷಣೆಯಲ್ಲಿ ಭಾಗವಹಿಸಿತ್ತು. ಪ್ರಶ್ನಾವಳಿಗಳು ಉತ್ತರಿಸುವ ಮೊದಲು ಕಾಯಿಗಳನ್ನು ನೋಡಲು ಹಾಗೂ ತಿಂದು ರುಚಿ ನೋಡುವುದಕ್ಕೆ ಅವಕಾಶ ನೀಡಲಾಗಿತ್ತು. ಅದನ್ನು ನೋಡಿದಾಗ, ಅಡಿಕೆ ಕಡಿಯುವಾಗ ಆಗುವ ಅನುಭವ, ಪರಿಮಳ ಮತ್ತು ಪ್ರತಿ ವೈವಿದ್ಯತೆಯ ಬಗ್ಗೆ ಕೆಲವು ವಿವರಗಳನ್ನು ತೀರ್ಪುಗಾರರ ಬಳಿ ಕೇಳಲಾಗಿದೆ.

ಈ ಸಂಬಂಧ ಕೇಂದ್ರದ ಪ್ರಧಾ‌ ತನಿಖಾಧಿಕಾರಿ ಡಾ. ನಾಗರಾಜ್ ಅಡಿವಪ್ಪರ ಮಾಹಿತಿ ನೀಡಿದ್ದು, ನಾವು ಈ ಗುಂಪಿನಿಂದ ಪಡೆದ ಫಲಿತಾಂಶವೂ ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಶಿವಮೊಗ್ಗ ತಾಲೂಕುಗಳ ಕೆಲವು ಭಾಗದಲ್ಲಿ ಬೆಳೆಯುವ ಅರೇಕಾದಲ್ಲಿ ತೀರ್ಥಹಳ್ಳಿಯ ತಳಿಯೂ ಉತ್ತಮವಾಗಿದೆ‌ ಎಂದು ಸೂಚಿಸಲಾಗಿದೆ. ತೀರ್ಥಹಳ್ಳಿ ಸಾಂಪ್ರದಾಯಿಕವಾಗಿ ಅಡಿಕೆ ಬೆಳೆಯುವ ಪ್ರದೇಶವಾಗಿದೆ. ಬಹುಪಾಲು ಬೆಳೆಗಾರರಯ ಎರಡರಿಂದ ಐದು ಎಕರೆ ತೋಟವನ್ನು ಹೊಂದಿದ್ದಾರೆ. ಹವಮಾನ ಪರಿಸ್ಥಿತಿಗಳು ಕೂಡ ಇಲ್ಲಿನ ಉತ್ಪನ್ನಕ್ಕೆ ಕೊಡುಗೆ ನೀಡುತ್ತವೆ ಎಂದು ಇಂಗ್ಲಿಷ್ ವೆಬ್ಸೈಟ್ ಗೆ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!