Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ : ಏನೆಲ್ಲಾ ಕಳವಾಯ್ತು..?

---Advertisement---

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಬಾರಿಗೆ ಜೈಲು ಸೇರಿದ್ದಾರೆ. ವಿಜಯಲಕ್ಷ್ಮೀ ಕಷ್ಟಪಟ್ಟು ಗಂಡನನ್ನ ಬಿಡಿಸಿಕೊಂಡು ಬಂದಿದ್ದರು. ಆದ್ರೆ ಮತ್ತೆ ಜೈಲು ಪಾಲಾದ ಪರಿಸ್ಥಿತಿ ಬಂದಿದೆ. ಆದ್ರೆ ಇದರ ನಡುವೆ ವಿಜಯಲಕ್ಷ್ಮೀ ದರ್ಶನ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಈ ಸಂಬಂಧ ವಿಜಯಲಕ್ಷ್ಮೀ ದರ್ಶನ್ ಅವರು ದೂರು ನೀಡಿದ್ದಾರೆ. ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯಲಕ್ಷ್ಮೀ ದರ್ಶನ್ ಅವರು ಇರುವುದು ಅಪಾರ್ಟ್ಮೆಂಟ್ ನಲ್ಲಿ. ಆದ್ರೆ ಆ ಕಳ್ಳ ಯಾರು..? ಅವರ ಮನೆಯನ್ನ ಟಾರ್ಗೆಟ್ ಮಾಡಿದ್ದು ಹೇಗೆ ಎಂಬೆಲ್ಲಾ ಪ್ರಶ್ನೆಗಳು ಹುಟ್ಟುಕೊಂಡಿವೆ. ಅದರಲ್ಲೂ ವಿಜಯಲಕ್ಷ್ಮೀಗೆ ಗಂಡ ಜೈಲಿನಲ್ಲಿರುವ ನೋವೆ ಜಾಸ್ತಿಯಾಗಿದೆ. ಹೀಗಿರುವಾಗ ಈ ರೀತಿಯ ಘಟನೆಗಳು ಸಹಜವಾಗಿಯೇ ನೋವು ತಂದಿರುತ್ತದೆ. ಹೊಸಕೆರೆಹಳ್ಳಿಯ ಪ್ರೆಸ್ಟೀಜ್ ಅಪಾರ್ಟ್ಮೆಂಟ್ ನಲ್ಲಿ ವಿಜಯಲಕ್ಷ್ಮೀ ವಾಸವಾಗಿದ್ದು, ಅದೇ ಮನೆಯಿಂದ 3 ಲಕ್ಷ ರೂಪಾಯಿ ಹಣವನ್ನು ಕದ್ದುಕೊಂಡು ಹೋಗಲಾಗಿದೆ. ಈ ಸಂಬಂಧ ಮ್ಯಾನೇಜರ್ ನಾಗರಾಜ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ವಿಜಯಲಕ್ಷ್ಮೀ ಅವರು ನಾಗರಾಜ್ ಬಳಿ ಸ್ವಲ್ಪ ಹಣವನ್ನು ಬೆಡ್ ರೂಮಿನ ವಾರ್ಡ್ ರೋನಲ್ಲಿ ಇರಿಸುವಂತೆ ಸೂಚನೆ ನೀಡಿದ್ದರಂತೆ. ಆ ಸೂಚನೆ ಮೇರೆಗೆ ಆ ವಾರ್ಡ್ ರೋನಲ್ಲಿಯೇ ನಾಗರಾಜ್ ಮೂರು ಲಕ್ಷ ಹಣವನ್ನು ಇರಿಸಿದ್ದರಂತೆ. ಆ ಬಳಿಕ ಮೈಸೂರಿಗೆ ತೆರಳಿದ್ದರಂತೆ. ಆದ್ರೆ ಸೆಪ್ಟೆಂಬರ್ 8ರಂದು ಬಂದು ನೋಡಿದಾಗ ಹಣ ಇರಲಿಲ್ಲ ಎನ್ನಲಾಗಿದೆ. ಮನೆ ಕೆಲಸದವರನ್ನು ಕೇಳಿದಾಗಲೂ ಯಾರೂ ಮಾಹಿತಿ ನೀಡಿಲ್ಲ. ಹೀಗಾಗಿ ದೂರು ನೀಡಲಾಗಿದೆ. ಸೆಪ್ಟೆಂಬರ್ 4-8ರ ಅವಧಿಯಲ್ಲಿ ಈ ಘಟನೆ ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...