Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಕ್ತಿಯಿಂದ ಕೈ ಮುಗಿದ, ಅರ್ಚಕ ಹೋದ ಕೂಡಲೇ ದೇವಿ ಮಾಂಗಲ್ಯವನ್ನೇ ಎಗರಿಸಿದ..!

Facebook
Twitter
Telegram
WhatsApp

 

ಮಂಡ್ಯ: ದೇವರಿಗೆ ಸೇರಿದ ಹಣವಾಗಲೀ, ವಸ್ತುಗಳನ್ನಾಗಲಿ ತೆಗೆದುಕೊಳ್ಳಲು ಎಲ್ಲರೂ ಭಯ ಪಡುತ್ತಾರೆ. ಆದ್ರೆ ಅಲ್ಲೊಬ್ಬ ಖತರ್ನಾಕ್ ಭಕ್ತ ದೇವಿಯ ಮಾಂಗಲ್ಯ ಸರವನ್ನೇ ಎಗರಿಸಿ ಎಸ್ಕೇಪ್ ಆಗಿರೋ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರಿನ ಹೊಳೆ ಬೀದಿಯಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ತಾಯಿ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಎಂದಿ‌ನಂತೆ ದೇವಸ್ಥಾನದಲ್ಲಿ ಪೂಜೆ ನಡೆದಿದೆ. ಆತ ಭಕ್ತನ ಸೋಗಿನಲ್ಲಿ ಬಂದು ದೇವಿಯ ಮುಂದೆ ಕೈ ಮುಗಿದು ಬೇಡುತ್ತಾ ನಿಂತಿದ್ದಾನೆ. ಅರ್ಚಕರು ತೀರ್ಥ, ಮಂಗಳಾರತಿ ಕೊಟ್ಟು ಸ್ವಲ್ಪ ಹೊರಗೆ ಹೋಗಿದ್ದಾರೆ.‌

ಅದೇ ಸಮಯವನ್ನ ಕಾಯುತ್ತಿದ್ದವನಂತೆ ತಾಯಿ ವಿಗ್ರಹವಿದ್ದ ಗರ್ಭ ಗುಡಿಗೆ ನುಗ್ಗಿ ತಾಳಿ ಕದ್ದು, ಅಲ್ಲಿಂದ ಪರಾರಿಯಾಗಿದ್ದಾನೆ. 6 ಗ್ರಾಂ ಚಿನ್ನದ ತಾಳಿ ಕಿತ್ತುಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ. ಕಳ್ಳ ದೇವಿಗೆ ಕೈಮುಗಿದು ಬಳಿಕ ಗರ್ಭ ಗುಡಿಗೆ ನುಗ್ಗಿ ಪರಾರಿಯಾಗುತ್ತಿರು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

ವಿಪರೀತ ಬೆನ್ನು ನೋವು : ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರಾ ದರ್ಶನ್..?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದಾಸನಿಗೆ ಅನಾರೋಗ್ಯ ಬಿಡದೆ ಕಾಡುತ್ತಿದೆ. ಅದರಲ್ಲೂ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದೆ. ಬೆನ್ನು ನೋವು ಎಂದು ಹೇಳಿದಾಗಿನಿಂದ ಜೈಲು ಅಧಿಕಾರಿಗಳು

ಡಾನಾ ಚಂಡಮಾರುತ ಎಫೆಕ್ಟ್ : ಹವಮಾನ ಇಲಾಖೆ ನೀಡಿದ ಎಚ್ಚರಿಕೆ ಏನು..?

ಎಲ್ಲೆಡೆ ಬೆಂಬಿಡದೆ ಮಳೆರಾಯ ಸುರಿಯುತ್ತಿದ್ದಾನೆ. ಕಳೆದ ಕೆಲವು ದಿನಗಳಿಂದ ವಿಶ್ರಾಂತಿಯನ್ನೇ ನೀಡುತ್ತಿಲ್ಲ. ಇದರಿಂದ ಜನರು ಕೂಡ ರೋಸೆದ್ದು ಹೋಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಹಾಗೂ ಒಡಿಶಾದಲ್ಲಿ ಶುರಿವಾಗಿರುವ ಚಂಡಮಾರುತದ ಪ್ರಭಾವವಾಗಿದೆ. ಚಂಡಮಾರುತ ತಗ್ಗುವ ತನಕವೂ ಈ

error: Content is protected !!