Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯುತ್ ಕಳ್ಳತನ ; 2.59 ಕೋಟಿ ರೂ. ದಂಡ ವಿಧಿಸಿದ ಬೆಸ್ಕಾಂ ಜಾಗೃತ ದಳ

Facebook
Twitter
Telegram
WhatsApp

ಬೆಂಗಳೂರು: ವಿದ್ಯುತ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂನ ಜಾಗೃತ ದಳ ಕಳೆದ 4 ತಿಂಗಳಲ್ಲಿ 10,908 ವಿದ್ಯುತ್ ಸ್ಥಾವರಗಳ ತಪಾಸಣೆ ಮಾಡಿ ತಪ್ಪಿತಸ್ಥ ಗ್ರಾಹಕರಿಗೆ 2.59 ಕೋಟಿ ರೂ. ದಂಡ ವಿಧಿಸಿದೆ.

ಸೆಪ್ಟೆಂಬರ್ ನಿಂದ ಡಿಸೆಂಬರ್ ತಿಂಗಳವರೆಗೆ ಒಟ್ಟು 1781 ಪ್ರಕರಣಗಳನ್ನು ಜಾಗೃತ ದಳ ದಾಖಲಿಸಿಕೊಂಡು ಅದರಲ್ಲಿ 1721 ಪ್ರಕರಣಗಳನ್ನು ಇತ್ಯರ್ಥಗೊಳಿಸಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಅದೇ ರೀತಿ ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಬೆಸ್ಕಾಂ ಕ್ರಮಗೊಂಡಿದ್ದು, ಕಳೆದ 3 ತಿಂಗಳಲ್ಲಿ ಬಾಕಿ ಇದ್ದ 1417.45 ಕೋಟಿ ರೂ. ನಲ್ಲಿ 358.3 ಕೋಟಿ ರೂ. ಬಿಲ್ ಮೊತ್ತವನ್ನು ಸಂಗ್ರಹಿಸಿದೆ. ಬಿಲ್ ಪಾವತಿಸದ ಸುಮಾರು 23 ಲಕ್ಷ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ ಎಂದು ಬೆಸ್ಕಾಂ ಎಂ.ಡಿ ವಿವರಿಸಿದರು.

ಬೆಸ್ಕಾಂ ನ ಮಾಪಕ ವಿಭಾಗದ ಸಿಬ್ಬಂದಿಗಳು ಸೆಪ್ಟೆಂಬರ್ ನಿಂದ ನವೆಂಬರ್ ತಿಂಗಳವರೆಗೆ 2373 ವಿದ್ಯುತ್ ಮೀಟರ್ ಗಳ ಪರಿಶೀಲನೆ ಮಾಡಿದ್ದು, ಜಕಾತಿ ದುರ್ಬಳಕೆ, ಅಧಿಕ ಲೋಡ್  ಮುಂತಾದ ಪ್ರಕರಣಗಳಲ್ಲಿ ಸುಮಾರು 7 ಕೋಟಿ ರೂ. ದಂಡ ವಿಧಿಸಿ 5 ಕೋಟಿ ರೂ. ಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಬೆಸ್ಕಾಂನ  ಕ್ಷೇತ್ರ ಸಿಬ್ಬಂದಿಗಳು 4,784 ವಿದ್ಯುತ್ ದುರುಪಯೋಗ ಪ್ರಕರಣಗಳನ್ನು ದಾಖಲಿಸಿಕೊಂಡು ತಪ್ಪಿತಸ್ಥರಿಗೆ 6.5 ಕೋಟಿ ರೂ. ದಂಡ ವಿಧಿಸುವುದರೊಂದಿಗೆ 3.9 ಕೋಟಿ ರೂ. ವಸೂಲಿ ಮಾಡಿದ್ದಾರೆ ಎಂದು ಬೆಸ್ಕಾಂ ಎಂ.ಡಿ ತಿಳಿಸಿದ್ದಾರೆ.

ಬೆಸ್ಕಾಂ ಕಾರ್ಯವ್ಯಾಪ್ತಿಯ ರಾಜಾಜಿನಗರ, ಜಯನಗರ, ಇಂದಿರಾನಗರ, ಮಲ್ಲೇಶ್ವರ, ಹೊಸಕೋಟೆ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ಚಿತ್ರದುರ್ಗ ಸೇರಿದಂತೆ ಒಟ್ಟು 11 ಜಾಗೃತ ದಳ ಠಾಣೆಗಳಲ್ಲಿ 11 ಇನ್ಸ್ಪೆಕ್ಟರ್ ಹಾಗೂ ಸಬ್-ಇನ್ಸ್ಪೆಕ್ಟರ್ ಗಳೊಂದಿಗೆ ಪೊಲೀಸ್ ಸೂಪರಿಂಟೆಡೆಂಟ್ ಮತ್ತು ಕಾರ್ಯನಿರ್ವಾಹಕ ಇಂಜಿನಿಯರ್ ಗಳ ನೇತೃತ್ವದಲ್ಲಿ ಜಾಗೃತ ದಳ ಕಾರ್ಯನಿರ್ವಹಿಸಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಕಾಂಗ್ರೆಸ್ ನೇತ್ರತ್ವದ ಇಂಡಿಯಾವನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ : ಸಂವಾದ ಕಾರ್ಯಕ್ರಮದಲ್ಲಿ ಕಾಮ್ರೇಡ್ ಕೆ.ರಾಧಾಕೃಷ್ಣ ಹೇಳಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 19 : “ದೇಶದಾದ್ಯಂತ ಇಂದು ಎರಡು ಒಕ್ಕೂಟಗಳು ಜನರ ಮುಂದಿವೆ. ಒಂದು ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತು ಇನ್ನೊಂದು ಕಾಂಗ್ರೆಸ್ ನೇತ್ರತ್ವ ಇಂಡಿಯಾ. ಇವೆರಡನ್ನು ನಾವು ಸಮಾನವಾಗಿ ವಿರೋಧಿಸುತ್ತೇವೆ ಎಂದು

ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲ : ಗೌಸ್ ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 19 : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾಯ್ದೆ ಮತ್ತು ಸೆಸ್ ಕಾಯ್ದೆ

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಯಾವುದೇ ರೀತಿಯ ಸಹಾಯವನ್ನು ಮಾಡಿಲ್ಲ : ರಣದೀಪ್ ಸುರ್ಜೆವಾಲಾ ವಾಗ್ದಾಳಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 19 : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಸಹಾಯವನ್ನು ಮಾಡದೇ ಎಲ್ಲದಕ್ಕೂ

error: Content is protected !!