Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರ ಪಂಪ್ ಸೆಟ್ ಗಳ ಕಳ್ಳತನ : ಸಿರಿಗೇರಿ ಪೊಲೀಸರಿಂದ ಆರೋಪಿಗಳ ಬಂಧನ

Facebook
Twitter
Telegram
WhatsApp

 

ಕುರುಗೋಡು. ಆ.19

ರೈತರು ತಮ್ಮ ಜಮೀನು ಗಳಿಗೆ ನೀರಾವರಿ ಕಲ್ಪಿಸಿಕೊಳ್ಳಲು ಸಮೀಪದ ಸಿರಿಗೇರಿ ಗ್ರಾಮದಲ್ಲಿ ಅಳವಡಿಸಿದ್ದ 5 ಎಚ್. ಪಿ
ಪಂಪ್ ಸೆಟ್ ಮೋಟರ್ ಗಳನ್ನು ಇಬ್ಬರು ಕಳ್ಳರು ಕಳ್ಳತನ ಮಾಡಿದ್ದು, ಆರೋಪಿಗಳನ್ನು ಸಿರಿಗೇರಿ ಪೊಲೀಸರು ಬಂಧಿಸಿದ್ದಾರೆ.

ಸಿರಿಗೇರಿ ಗ್ರಾಮದ ಜಡೆಪ್ಪ ಎಂಬ ರೈತರು ತಮ್ಮ ಜಮೀನಿನಲ್ಲಿ ಅಳವಡಿಸಿದ್ದ ಲೂಬಿ ಕಂಪನಿಯ 5 ಎಚ್. ಪಿ ನೀರೇತ್ತುವ ಮನೋ ಬ್ಲಾಕ್ ಪಂಪ್ ಸೆಟ್ ಕಳುವಾದ ಬಗ್ಗೆ ಸಿರಿಗೇರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೂರಿನ ಅನ್ವಯ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಎಎಸ್ಪಿ ನಟರಾಜ್, ಡಿವೈಎಸ್ಪಿ ವೆಂಕಟೇಶ್, ತೆಕ್ಕಲಕೋಟೆ ಸಿಪಿಐ ಸುಂದರೇಶ್ ಅವರ ಮಾರ್ಗದರ್ಶನದಲ್ಲಿ ಸಿರಿಗೇರಿ ಪಿಎಸ್ ಐ ಸದ್ದಾಂ ಹುಸೇನ್ ಹೆಚ್. ಅವರ ನೇತೃತ್ವದಲ್ಲಿ ತಂಡ ರಚಿಸಿದ್ದು, ಸದರಿ ತಂಡವು ಈ ಪ್ರಕರಣವನ್ನು ಭೇದಿಸಿ ಸಿರಿಗೇರಿ ಗ್ರಾಮದ ಕೆ. ಮಾರುತಿ (20). ಕರಿಬಸವ (25) ಈ ಆರೋಪಿಗಳನ್ನು ಬಂಧಿಸಿ ಬಂದಿತರಿಂದ ವಿವಿಧ ಕಂಪನಿಗಳ 5 ಪಂಪ್ ಸೆಟ್ ಗಳ ಮೋಟರನ್ನು ಜಪ್ತಿ ಮಾಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸಿರಿಗೇರಿ ಪೊಲೀಸರು ತಿಳಿಸಿದ್ದಾರೆ.

ಈ ತಂಡದಲ್ಲಿ ಸಿರಿಗೇರಿ ಠಾಣೆಯ ಎಎಸ್ ಐ ಹೆಚ್. ಗಂಗಣ್ಣ, ಸಿಬ್ಬಂದಿಯಾದ ಉಮಾಶಂಕರ್, ಶಿವರಾಯಪ್ಪ, ಹುಲಿಕುಂಟೆಪ್ಪ, ಮಂಜುನಾಥ್, ರಮೇಶ್, ಚಂದ್ರಶೇಖರ, ರಾಮಕೃಷ್ಣ, ಪ್ರಭಾಕರ್, ವಿನೋದ್ ಗೌಡ, ರಂಗಣ್ಣ, ದಿವಾಕರ್ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!