Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರ ಪಂಪ್ ಸೆಟ್ ಗಳ ಕಳ್ಳತನ : ಸಿರಿಗೇರಿ ಪೊಲೀಸರಿಂದ ಆರೋಪಿಗಳ ಬಂಧನ

Facebook
Twitter
Telegram
WhatsApp

 

ಕುರುಗೋಡು. ಆ.19

ರೈತರು ತಮ್ಮ ಜಮೀನು ಗಳಿಗೆ ನೀರಾವರಿ ಕಲ್ಪಿಸಿಕೊಳ್ಳಲು ಸಮೀಪದ ಸಿರಿಗೇರಿ ಗ್ರಾಮದಲ್ಲಿ ಅಳವಡಿಸಿದ್ದ 5 ಎಚ್. ಪಿ
ಪಂಪ್ ಸೆಟ್ ಮೋಟರ್ ಗಳನ್ನು ಇಬ್ಬರು ಕಳ್ಳರು ಕಳ್ಳತನ ಮಾಡಿದ್ದು, ಆರೋಪಿಗಳನ್ನು ಸಿರಿಗೇರಿ ಪೊಲೀಸರು ಬಂಧಿಸಿದ್ದಾರೆ.

ಸಿರಿಗೇರಿ ಗ್ರಾಮದ ಜಡೆಪ್ಪ ಎಂಬ ರೈತರು ತಮ್ಮ ಜಮೀನಿನಲ್ಲಿ ಅಳವಡಿಸಿದ್ದ ಲೂಬಿ ಕಂಪನಿಯ 5 ಎಚ್. ಪಿ ನೀರೇತ್ತುವ ಮನೋ ಬ್ಲಾಕ್ ಪಂಪ್ ಸೆಟ್ ಕಳುವಾದ ಬಗ್ಗೆ ಸಿರಿಗೇರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೂರಿನ ಅನ್ವಯ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಎಎಸ್ಪಿ ನಟರಾಜ್, ಡಿವೈಎಸ್ಪಿ ವೆಂಕಟೇಶ್, ತೆಕ್ಕಲಕೋಟೆ ಸಿಪಿಐ ಸುಂದರೇಶ್ ಅವರ ಮಾರ್ಗದರ್ಶನದಲ್ಲಿ ಸಿರಿಗೇರಿ ಪಿಎಸ್ ಐ ಸದ್ದಾಂ ಹುಸೇನ್ ಹೆಚ್. ಅವರ ನೇತೃತ್ವದಲ್ಲಿ ತಂಡ ರಚಿಸಿದ್ದು, ಸದರಿ ತಂಡವು ಈ ಪ್ರಕರಣವನ್ನು ಭೇದಿಸಿ ಸಿರಿಗೇರಿ ಗ್ರಾಮದ ಕೆ. ಮಾರುತಿ (20). ಕರಿಬಸವ (25) ಈ ಆರೋಪಿಗಳನ್ನು ಬಂಧಿಸಿ ಬಂದಿತರಿಂದ ವಿವಿಧ ಕಂಪನಿಗಳ 5 ಪಂಪ್ ಸೆಟ್ ಗಳ ಮೋಟರನ್ನು ಜಪ್ತಿ ಮಾಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಸಿರಿಗೇರಿ ಪೊಲೀಸರು ತಿಳಿಸಿದ್ದಾರೆ.

ಈ ತಂಡದಲ್ಲಿ ಸಿರಿಗೇರಿ ಠಾಣೆಯ ಎಎಸ್ ಐ ಹೆಚ್. ಗಂಗಣ್ಣ, ಸಿಬ್ಬಂದಿಯಾದ ಉಮಾಶಂಕರ್, ಶಿವರಾಯಪ್ಪ, ಹುಲಿಕುಂಟೆಪ್ಪ, ಮಂಜುನಾಥ್, ರಮೇಶ್, ಚಂದ್ರಶೇಖರ, ರಾಮಕೃಷ್ಣ, ಪ್ರಭಾಕರ್, ವಿನೋದ್ ಗೌಡ, ರಂಗಣ್ಣ, ದಿವಾಕರ್ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

error: Content is protected !!