Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಧಾನಪರಿಷತ್ತಿಗೆ ಅರ್ಹರನ್ನು ಆಯ್ಕೆ ಮಾಡಿದಾಗ ಮಾತ್ರ ತಮ್ಮ ಸಮಸ್ಯೆಗಳು ಬಗೆಹರಿಯಲು ಸಾಧ್ಯ; ಲೋಕೇಶ್ ತಾಳಿಕಟ್ಟೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್.13 : ಆಳುವ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದಾಗ ಮಾತ್ರ ದೇಶ ಹಾಗೂ ರಾಜ್ಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಆದರೆ ಶಿಕ್ಷಣಕ್ಕೆ ಸರ್ಕಾರಗಳು ಬಜೆಟ್ ನಲ್ಲಿ ಅತ್ಯಂತ ಕಡಿಮೆ ಮೊತ್ತದ ಅನುದಾನವನ್ನು ಮೀಸಲಿರಿಸಿ ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿವೆ ಎಂದು ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದ ಆಕಾಂಕ್ಷಿ ಲೋಕೇಶ್ ತಾಳಿಕಟ್ಟೆ ಅಭಿಪ್ರಾಯ ಪಟ್ಟರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ ನಾಲ್ಕೈದು ವರ್ಷಗಳಿಂದ ಸರ್ಕಾರ ಶಿಕ್ಷಣಕ್ಕೆ ಅನ್ಯಾಯವೆಸಗುತ್ತ ಬರುತ್ತಿದೆ.  ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳು ಎಂಬ ತಾರತಮ್ಯ ಅನುಸರಿಸಿ ಇಲ್ಲ ಸಲ್ಲದ ಕಾನೂನುಗಳನ್ನು ರೂಪಿಸಿ ಖಾಸಗಿ ಶಾಲೆಗಳನ್ನು ಸರ್ವನಾಶ ಮಾಡಲು ಹೊರಟಿದೆ.  ಇತ್ತ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸದೆ ಖಾಸಗಿ ಶಾಲೆಗಳನ್ನು ಬದುಕಲು ಬಿಡದೆ ಖಾಸಗಿ ಶಾಲೆಗಳ ನವೀಕರಣ ಹೊಸ ಶಾಲೆಗಳಿಗೆ ಅನುಮತಿ ಆರ್ ಟಿ ಇ ಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡದೆ ಭ್ರಷ್ಟಾಚಾರವನ್ನು ಎಸೆಗುತ್ತಿದ್ದು ಇದರಿಂದಾಗಿ ಖಾಸಗಿ ಶಾಲೆಗಳು ನಡೆಸುವುದೇ ಕಷ್ಟಕರವಾಗಿದೆ. ಸರ್ಕಾರ 2018 ರಿಂದ ಇತ್ತೀಚಿನವರೆಗೆ ಮಕ್ಕಳ ದಾಖಲಾತಿ ಕೊರತೆಯಿಂದ ಸುಮಾರು 20,000 ಸರ್ಕಾರಿ ಶಾಲೆಗಳನ್ನು ಮುಚ್ಚಿರುವುದರಿಂದ ಲಕ್ಷಾಂತರ ಮಕ್ಕಳ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ.

ಇಂತಹ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಮುಂದಿನ 2024ರ ಮೇ ತಿಂಗಳಿನಲ್ಲಿ ನಡೆಯಲಿರುವ ಐದು ಜಿಲ್ಲೆಗಳ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛೆ ಹೊಂದಿದ್ದು ಅನುದಾನ ಅನುದಾನ ರಹಿತ ಸರ್ಕಾರಿ ಶಾಲೆಗಳ ಎಲ್ಲಾ ಶಿಕ್ಷಕರು ಬೆಂಬಲ ನೀಡಿದಲ್ಲಿ ಶಿಕ್ಷಕರ ಸಮಸ್ಯೆಗಳನ್ನು ವಿಧಾನಸೌಧದಲ್ಲಿ ಧ್ವನಿ ಎತ್ತಲು ಸಹಾಯಕವಾಗುತ್ತದೆ. ಶಿಕ್ಷಕರು ತಮ್ಮ ಸಮಸ್ಯೆಗಳನ್ನು ಅರಿಯದ ರಾಜಕಾರಣಿಗಳನ್ನು ಗೆಲ್ಲಿಸಿಕೊಳ್ಳುತ್ತಿರುವುದರಿಂದ ನಮ್ಮ ಸಮಸ್ಯೆಗಳು ಇಂದಿಗೂ ಬಗೆಹರಿಯದೆ ಉಳಿದಿವೆ ಇಂತಹ ಕಷ್ಟಕರ ಸಂದಿಗ್ದ ಸ್ಥಿತಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆಯಲ್ಲಿ ಬೆಂಬಲಿಸಿ, ವಿಧಾನಪರಿಷತ್ ಗೆ ಆಯ್ಕೆ ಮಾಡಿದರೆ ಪ್ರಾಮಾಣಿಕವಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಅನುಕೂಲಕರವಾಗುತ್ತದೆ ಎಂದು ತಿಳಿಸಿದರು.

ಅನುದಾನ ರಹಿತ ಶಾಲೆಗಳ ತಾಲೂಕು ಅಧ್ಯಕ್ಷ ಯಾದಲಗಟ್ಟೆ ಜಗನ್ನಾಥ್ ಮಾತನಾಡಿ ಲೋಕೇಶ್ ತಾಳಿಕಟ್ಟೆಯವರು ಸತತ ನಾಲ್ಕು ವರ್ಷಗಳಿಂದ ರಾಜ್ಯದ ವಿವಿಧ ಮೂಲಗಳಲ್ಲಿ ಸಂಚರಿಸಿ ಖಾಸಗಿ ಅನುದಾನ ಅನುದಾನ ರಹಿತ ಶಾಲೆಗಳ ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದಾರೆ ಕಳೆದ ಬೆಳಗಾವಿ ಅಧಿವೇಶನದಲ್ಲಿ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟಿಸಿದ್ದಾರೆ ಶಿಕ್ಷಕರ ಎಲ್ಲ ಸಮಸ್ಯೆಗಳು ಬಗೆಹರಿಯಬೇಕಾದರೆ ಶಿಕ್ಷಣದ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ಜ್ಞಾನ ಹೊಂದಿರುವವರನ್ನು ವಿಧಾನಪರಿಷತ್ ಗೆ ಆಯ್ಕೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಹೀಗಾಗಿ ಅವರನ್ನು ನಾವೆಲ್ಲರೂ ಬೆಂಬಲಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಂಜುನಾಥ್ ದಯಾನಂದ್ ರವಿಕುಮಾರ್ ಗೌರೀಶ್ ಸುಭಾಷ್ ಶೌಕತ್ ಅಲಿ ಚಂದ್ರಣ್ಣ ರಾಮು ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ, ಬುಧವಾರ ರಾಶಿ ಭವಿಷ್ಯ -ಮೇ-1,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

error: Content is protected !!