Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದ ಐವರಿಗೆ ಸಚಿವ ಸ್ಥಾನ : ಮೋದಿ ಸಂಪುಟದಲ್ಲಿ ಇರುವವರು ಇವರೇ

Facebook
Twitter
Telegram
WhatsApp

 

 

ಬೆಂಗಳೂರು: ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.‌ ಮೋದಿ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ. ಕರ್ನಾಟಕದಿಂದ ಎಷ್ಟು ಜನ ಇರುತ್ತಾರೆ ಎಂಬ ವಿಚಾರ ಎಲ್ಲರಿಗೂ ಸಾಮಾನ್ಯವಾಗಿಯೇ ಕುತೂಹಲ ಮೂಡಿಸಿದೆ. ಒಂದು ಮೂಲದ ಮಾಹಿತಿ ಪ್ರಕಾರ ಐವರಿಗೆ ಕೇಂದ್ರದಲ್ಲಿ ಸ್ಥಾನ ಸಿಗಬಹುದು ಎನ್ನಲಾಗಿದೆ.

ಈಗಾಗಲೇ ಸಂಭಾವ್ಯ ಪಟ್ಟಿ ಬಿಡುಗಡೆಯಾಗಿದ್ದು, ಕುತೂಹಲ ಕೆರಳಿಸಿದೆ. ಕೇಂದ್ರ ಸಚಿವ ಸ್ಥಾನ ಪಡೆಯುವ ಮೂವರಿಗೆ ಇಂದು ಮೋದಿ ಆಹ್ವಾನ ನೀಡಿದ್ದರು. ಪ್ರಹ್ಲಾದ್ ಜೋಶಿ, ಸೋಮಣ್ಣ, ಕುಮಾರಸ್ವಾಮಿ ಅವರನ್ನು ಆಹ್ವಾನ ಮಾಡಲಾಗಿತ್ತು.

ಇಂದು ಮೋದಿ ಮನೆಯಲ್ಲಿಯೇ ಚಹಾಕೂಟದಲ್ಲಿ ಸಾಕಷ್ಟು ಜನ ಸೇರಿದ್ದರು. ಈ ಚಹಾಕೂಟಕ್ಕೆ ವಿ.ಸೋಮಣ್ಣ ಅವರಿಗೂ ಆಹ್ವಾನವಿದ್ದದ್ದು ಮಾತ್ರ ಆಶ್ಚರ್ಯಕ್ಕೆ ಕಾರಣವಾಗಿತ್ತು. ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ವಿ. ಸೋಮಣ್ಣ ಕೇಂದ್ರ ಸಚಿವರಾಗುವ ಎಲ್ಲಾ ಮುನ್ಸೂಚನೆ ಸಿಕ್ಕಿದೆ.

ಇನ್ನು ಇದೇ ವೇಳೆ ನಿರ್ಮಲಾ ಸೀತರಾಮನ್ ಕೂಡ ಸಭೆಯಲ್ಲಿ ಇದ್ದರು. ಮೋದಿ ಸರ್ಕಾರದಲ್ಲಿಯೇ ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವೆಯಾಗಿದ್ದರು. ಇದೀಗ ಸಭೆಯಲ್ಲಿ ಭಾಗಿಯಾಗಿರುವುದನ್ನು ನೋಡಿದರೆ ಮತ್ತೆ ಕೇಂದ್ರ ಸಚಿವೆಯಾಗುವ ಸಾಧ್ಯತೆ ಇದೆ. ಮತ್ತೊಮ್ಮೆ ಮೋದಿ ಸಂಪುಟದಲ್ಲಿ ಖಾತೆ ಪಡೆಯಲಿದ್ದಾರೆ. ನಿರ್ಮಲಾ ಸೀತರಾಮನ್ ಸದ್ಯ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!