Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರ ಬದುಕಿಗಾಗಿ ಹಲವು ಯೋಜನೆ ಹಾಕಿಕೊಳ್ಳಲಾಗುವುದು: ಎಸ್ ಟಿ ಸೋಮಶೇಖರ್

Facebook
Twitter
Telegram
WhatsApp

*ರೈತರ ಬದುಕಿಗಾಗಿ ಹಲವು ಯೋಜನೆ ಹಾಕಿಕೊಳ್ಳಲಾಗುವುದು: ಎಸ್ ಟಿ ಸೋಮಶೇಖರ್*

ಬೆಂಗಳೂರು: ರೈತರ ಬದುಕು ಹಸನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಹಾಕಿಕೊಳ್ಳುತ್ತಿದ್ದು, ಎಲ್ಲ ರೈತರಿಗೂ ಸಾಲ ಸೌಲಭ್ಯ ಸಿಗಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಕೃಷಿ ಸಾಲ ನೀಡುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿಯೇ ಅಲ್ಪಾವಧಿ, ಮಧ್ಯಮಾವಧಿ/ದೀರ್ಘಾವಧಿ ಸಾಲ ವಿತರಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಅಲ್ಪಾವಧಿ ಸಾಲ ನೀಡಿಕೆ ವಿಭಾಗದಲ್ಲಿ 30,25,788 ರೈತರಿಗೆ 19,370 ಕೋಟಿ ರೂ. ಸಾಲ ನೀಡಿಕೆ ಗುರಿಯನ್ನು ಹೊಂದಿದೆ. ಈಗಾಗಲೇ 12,25,027 ರೈತರಿಗೆ 8,742.10 ಕೋಟಿ ರೂ. ಸಾಲ ವಿತರಿಸಿ ಶೇ. 45.55 ಸಾಧನೆ ಮಾಡಿದೆ. ಅಲ್ಲದೇ, ಮಧ್ಯಮಾವಧಿ/ದೀರ್ಘಾವಧಿ ಸಾಲ ನೀಡಿಕೆ ವಿಭಾಗದಲ್ಲಿ 59,856 ರೈತರಿಗೆ 1,440 ಕೋಟಿ ರೂಪಾಯಿ ಸಾಲ ನೀಡಿಕೆ ಗುರಿಯನ್ನು ಹಾಕಿಕೊಳ್ಳಲಾಗಿದೆ.ಇದರಲ್ಲಿ 10009 ರೈತರಿಗೆ 394.79 ಕೋಟಿ ರೂಪಾಯಿಯನ್ನು ಸಾಲವಾಗಿ ವಿತರಿಸಲಾಗಿದೆ. ಈ ಮೂಲಕ ಶೇ. 27.41ರಷ್ಟು ಸಾಧನೆ ತೋರಲಾಗಿದೆ. ಅಂದರೆ, ಈ ಮೂರೂ ವಿಭಾಗದಲ್ಲಿ ಒಟ್ಟಾರೆಯಾಗಿ 30,85,644 ರೈತರಿಗೆ 20810 ಕೋಟಿ ರೂ. ಕೃಷಿ ಸಾಲ ನೀಡುವ ಗುರಿಯಲ್ಲಿ ಈಗಾಗಲೇ ಅಕ್ಟೋಬರ್ 23ರವರೆಗೆ 12,35,033 ರೈತರಿಗೆ 9,136.89 ಕೋಟಿ ರೂಪಾಯಿ ಸಾಲವನ್ನು ನೀಡುವ ಮುಖಾಂತರ ಶೇ. 72.96 ಸಾಧನೆಯನ್ನು ರಾಜ್ಯ ಸರ್ಕಾರ ಮಾಡಿದೆ.

ರೈತರ ಕೃಷಿ ಚಟುವಟಿಕೆಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿ ಇದ್ದರೂ ಸಹ 21 ಡಿಸಿಸಿ ಬ್ಯಾಂಕ್‌ಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಅರ್ಹ ಫಲಾನುಭವಿಗಳಿಗೆ ಸಾಲ ಕೊಡುವಂತೆ ಸೂಚಿಸಿರುವುದಾಗಿ ಎಂದು ಸಹಕಾರ ಸಚಿವರು ಹೇಳಿದ್ದಾರೆ.

ಡಿಸಿಸಿ ಬ್ಯಾಂಕ್‌ಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯನ್ನು ಶೀಘ್ರದಲ್ಲೇ ಕರೆದು ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಿರುವ ಸಚಿವರು, ಈ ಮೂಲಕ ಬ್ಯಾಂಕ್‌ಗಳು ತೋರಿರುವ ಸಾಧನೆ, ಎದುರಿಸುತ್ತಿರುವ ಸಣ್ಣಪುಟ್ಟ ತೊಡಕುಗಳು, ಸಮಸ್ಯೆಗಳ ಬಗ್ಗೆಯೂ ಚರ್ಚಿಸಿ, ಪರಿಹಾರಗಳನ್ನು ಸೂಚಿಸಲು ನಿರ್ಧರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!