ಸಚಿವ ಮಧು ಬಂಗಾರಪ್ಪರಿಂದ ಕೊಲೆ‌ ಬೆದರಿಕೆ ಇದೆ : ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ

Facebook
Twitter
Telegram
WhatsApp

 

 

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಪ್ರಣಾವನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಮಧು ಬಂಗಾರಪ್ಪ ಅವರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಹೇಳಿದ್ದಾರೆ. ಮಧು ಬಂಗಾರಪ್ಪ ಅವರ ಬೆಂಬಲಿಗರು ನನಗೆ ಕರೆ ಮಾಡಿ, ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದಿದ್ದಾರೆ.

ಇನ್ನು ಇಂದು ಕಮಿಷನರ್ ಅವರನ್ನು ಭೇಟಿ ಮಾಡಿ, ಈ ಸಂಬಂಧ ದೂರು ನೀಡುವುದಾಗಿ ತಿಳಿಸಿದ್ದಾರೆ. ಹರಿಪ್ರಸಾದ್ ಅವರಿಗೆ ಸ್ಥಾನಮಾನ ನೀಡಿ ಅಂತ ಕೇಳುವುದರಲ್ಲಿ ತಪ್ಪೇನಿದೆ. ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದು ತಪ್ಪಲ್ಲ. ಬೇರೆ ಸಮುದಾಯದವರಿಗಾಗಿ ಹೋರಾಟ ಮಾಡಿದರಲ್ಲಾ, ಆ ಸಮುದಾಯಕ್ಕೆ ಮಧು ಬಂಗಾರಪ್ಪ ಅವರ ಕೊಡುಗೆ ಏನು..? ಎಂದು ಪ್ರಶ್ನಿಸಿದ್ದಾರೆ.

ನಾನು ಸಮುದಾಯದ ಭೂಮಿ ಕೊಳ್ಳೆ ಹೊಡೆದಿಲ್ಲ. ಸೈಟ್ ಮಾಡಿ ಮಾರಾಟ‌ ಮಾಡಿಲ್ಲ. ಬಿಕೆ ಹರಿಪ್ರಸಾದ್ ಕಳ್ಳತನ ಮಾಡಿದವರಲ್ಲ. ಈಡಿಗ ಸಮುದಾಯವನ್ನು ಸರ್ಕಾರವೇ ಹತ್ತಿಕ್ಕುತ್ತಿದೆ. ಸ್ವಾಮೀಜಿಗಳ ವಿರುದ್ಧ ಸಂಚು ನಡೆಯುತ್ತಿದೆ. ನನ್ನ ಡಿಎನ್ಎ ವಿಚಾರ ನಿಮಗೆ ಯಾಕೆ ಬೇಕು. ನಾನು ಸ್ವಾಮೀಜಿ ಅಲ್ಲ ಅಂತ ಹೇಳುವುದಕ್ಕೆ ಅವರು ಯಾರು..? ಸಮುದಾಯಕ್ಕೆ ಅನ್ಯಾಯವಾದರೆ ಅದಕ್ಕೆ ನೀವೆ ಹೊಣೆ. ನಿಮ್ಮ ಹಿನ್ನೆಲೆ ಏನು ಅಂತ ನಿಮಗೆ ಗೊತ್ತಿದೆಯಾ..? ಎಂದಿದ್ದಾರೆ.

ಈ ಆರೋಪದ ವಿಚಾರವಾಗಿ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಪ್ರಣಾವನಾಂದ ಶ್ರೀಗಳು ಕಣ್ಣೀರು ಯಾಕೆ ಹಾಕಿರುವುದು..? ಅವರೇನು ತಪ್ಪು ಮಾಡಿದ್ದಾರಾ..? ಪ್ರಣವಾನಂದ ಶ್ರೀಗಳು ನಮ್ಮ ಸಮುದಾಯದವರೇ ಅಲ್ಲ. ಅವರೇನು ಈಡಿಗ ಸಮುದಾಯದವರಾ..? ಅವರ ಹಿನ್ನಲೆಯಲ್ಲಿ ಕೆದಕಿ ನಿಮಗೆ ಗೊತ್ತಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಿ ಕೆಲಸ ಕೊಡಿಸುವುದಾಗಿ ಸಚಿವರ ಆಪ್ತರಿಂದ ಕೋಟಿ ಕೋಟಿ ಲೂಟಿ : ರಾಯಚೂರು ನಿರುದ್ಯೋಗಿ ಯುವಕರಿಗೆ ಮೋಸ..!

ರಾಯಚೂರು: ರಾಜ್ಯದಲ್ಲಿ ಚೈತ್ರಾ ಮೋಸ ಇನ್ನು ವಿಧವಿಧವಾಗಿ ತೆರೆದುಕೊಳ್ಳುತ್ತಲೇ ಇದೆ. ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾಳೆ‌. ಆದರೆ ಈಗ ಮತ್ತೊಂದು ಮೋಸ ಬಯಲಾಗಿದೆ. ಸಚಿವರ ಆಪ್ತರೊಬ್ಬರು ನಿರುದ್ಯೋಗಿ ಯುವಕರನ್ನೇ ಟಾರ್ಗೆಟ್

ಕಾವೇರಿ ವಿಚಾರಕ್ಕೆ ಕಣ್ಣೀರು ಹಾಕಿದ ಮಾಜಿ ಪ್ರಧಾನಿ ದೇವೇಗೌಡ..!

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಎಂದು ಆಗ್ರಹಿಸಿ ಇಂದು ಹಲವಾರು ಸಂಘಟನೆಗಳು ಪ್ರತಿಭಟಿಸುತ್ತಿವೆ. ಈ ಮಧ್ಯೆ ಮಾಜಿ ಪ್ರಧಾನಿ ದೇವೇಗೌಡ್ರು ಸುದ್ದಿಗೋಷ್ಟಿ ನಡೆಸಿ, ಕಾವೇರಿ ವಿಚಾರಕ್ಕೆ ಕಣ್ಣೀರು ಹಾಕಿದ್ದಾರೆ‌. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ

ಹಿರಿಯೂರಿನಲ್ಲಿ ನಡೆದ ಜನತಾ ದರ್ಶನ ಹೇಗಿತ್ತು ? ಸಚಿವ ಸುಧಾಕರ್ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…!

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.25 : ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯೂರು

error: Content is protected !!