Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದೊಂದು ಬಾರಿ ಕುಮಾರಸ್ವಾಮಿಯನ್ನು ಆಶೀರ್ವದಿಸೋಣಾ ಎಂಬ ಚರ್ಚೆಗಳು ನಡೆಯುತ್ತಿವೆ : ಹೆಚ್ಡಿಕೆ

Facebook
Twitter
Telegram
WhatsApp

ರಾಮನಗರ: ಜನತಾ ಜಲಧಾರೆಯ ಸಮಾರೋಪ ಸಮಾರಂಭ ಇಂದುನಡೆಯಲಿದೆ. ಈ ಹಿನ್ನೆಲೆ ಹೆಚ್ ಡಿ ಕುಮಾರಸ್ವಾಮಿ ಅವರು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ನವರ ಟ್ವೀಟಾಸ್ತ್ರದ ಬಗ್ಗೆ ಮಾತನಾಡಿ, ಕಾಂಗ್ರೆಸ್ ನವರದ್ದು ನಿನ್ನೆಯಿಂದ ತೋರಿಸುತ್ತಾ ಇದ್ದೀರಿ. ಅಷ್ಟು ದೊಡ್ಡಮಟ್ಟದ ಸಮಸ್ಯೆ ನಮ್ಮ ಪಕ್ಷದಲ್ಲಿಲ್ಲ. ಬಗೆಹರಿಸಿಕೊಳ್ಳದೆ ಇರುವಂಥ ಸಮಸ್ಯೆಗಳೇನು ಇಲ್ಲ. ಆದಷ್ಟು ಬೇಗ ಬಗೆಹರಿಸಿಕೊಳ್ಳುತ್ತೇವೆ. ಆ ಗಲಾಟೆಯಲ್ಲ ಅವರ ಪಕ್ಷಕ್ಕೆ ಸಂಬಂಧಿಸಿದ್ದು, ನಾನ್ಯಾಕೆ ಆ ಬಗ್ಗೆ ತಲೆಕೆಡಿಸಿಕೊಳ್ಳಲಿ.

ಕನಿಷ್ಟ 4-5 ಲಕ್ಷ ಜನ ಆ ಸಭೆಯಲ್ಲಿ ಭಾಗವಹಿಸುತ್ತಾ ಇದ್ದಾರೆ. ಎಲ್ಲಾ ರೀತಿಯ ಸುಸಜ್ಜಿತ ವ್ಯವಸ್ಥೆಗಳು ನಡೆದಿದೆ. ವೇದಿಕೆ ಕೂಡ ಸರಿಯಾದ ರೀತಿಯಲ್ಲಿ ಮಾಡಲಾಗಿದೆ. ಎಲ್ಲಾ ಕಡೆ ಜಗಜ್ಜಾಹೀರಾಗಿದೆ. ಎಲ್ಲಿ ಜನತಾ ಜಲಧಾರೆಯ ಕಳಸ ಇರುವ ವಾಹನಗಳು ಪ್ರವಾಸ ಹೊರಟವು ಆ ಪ್ರದೇಶದಲ್ಲಿ ಸಂಪೂರ್ಣವಾಗಿ ಮಳೆಯಾಗಿದೆ. ಎಲ್ಲರಿಗೂ ಅದೇ ಆಶ್ಚರ್ಯ. ಇವತ್ತು ಜೆಡಿಎಸ್ ನ ಜನತಾ ಜಲಧಾರೆಯ ಕಳಸಾ ವಾಹನಗಳು ಬಂದಂತ ಭಾಗದಲ್ಲಿ, ಕಾರ್ಯಕ್ರಮ ಏರ್ಪಾಡು ಮಾಡಿದ ಬಳಿಕ ಧಾರಾಕಾರವಾಗಿ ಮಳೆ ಬಂದಿದೆ. ಇದು ಒಂದು ರೀತಿಯ ಕಾಕತಾಳೀಯ. ಆದರೆ ಇದು ಹೋರಾಟದ ಹುಮ್ನಸ್ಸು ನೀಡಿದೆ‌.

ಇಲ್ಲಿ ಜನಗಳ ವಿಶ್ವಾಸಗಳಿಸುವುದಕ್ಕೆ ಜನತಾ ಜಲಧಾರೆ ಹೋಗಿದ್ದು. ಜನಗಳಲ್ಲಿ ತಿಳುವಳಿಕೆ ಬರಬೇಕು. ಯಾವುದೇ ನದಿಯ ನೀರನ್ನು ಬಳಸಿಕೊಳ್ಳುವಲ್ಲಜ ನಮ್ಮ ವಿಫಲತೆ ಏನಾಗಿದೆ ಅದನ್ನು ಸರಿಪಡಿಸುವ ಕೆಲಸವಾಗಿದೆ. ಜನತಾ ಜಲಧಾರೆ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ನಡೆಯುತ್ತಿದೆ. ಇದೊಂದು ಉತ್ತಮವಾದ ಕಾರ್ಯ, ಈ ಒಂದು ಬಾರಿ ಕುಮಾರಸ್ವಾಮಿ ಅವರನ್ನು ಆಶೀರ್ವದಿಸೋಣಾ ಎಂಬ ಚರ್ಚೆಗಳು ಶುರುವಾಗಿವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೃತ ನೇಹಾ ಮನೆಗೆ ಮುಸ್ಲಿಂ ಮುಖಂಡರ ಭೇಟಿ : ನಿರಂಜನ ದೇಶಪಾಂಡೆಗೆ ಸಾಂತ್ವನ

ಹುಬ್ಬಳ್ಳಿ: ನೇಹಾ ಎಂಬ ಎಂಸಿಎ ವಿದ್ಯಾರ್ಥಿನಿಯನ್ನು ಫಯಾಜ್ ನಿನ್ನೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯನ್ನು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಹೋರಾಟಗಳು ಕೂಡ ನಡೆದಿವೆ. ಇದೀಗ ಮುಸ್ಲಿಂ ಮುಖಂಡರು

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

error: Content is protected !!