Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಕ್ಕುಂಡಿ ಗ್ರಾಮವನ್ನೇ ಸ್ಥಳಾಂತರಿಸಲು ಕೇಳಿ ಬರ್ತಿದೆ ಒತ್ತಾಯ..!

---Advertisement---

ಗದಗ: ಲಕ್ಕುಂಡಿಯಲ್ಲಿ ಇತ್ತಿಚೆಗೆ ಕುಟುಂಬವೊಂದಕ್ಕೆ ಸಿಕ್ಕ ಚಿನ್ನದ ವಸ್ತುಗಳು ಭಾರೀ ಸುದ್ದಿಯಾಗಿತ್ತು. ಆ ಮುಗ್ಧ ಕುಟುಂಬ ಅದನ್ನೆಲ್ಲಾ ಸರ್ಕಾರಕ್ಕೂ ಒಪ್ಪಿಸಿದೆ. ಇದೇ ವೇಳೆ ಲಕ್ಕುಂಡಿಯಲ್ಲಿ ಉತ್ಖನನ ಕೂಡ ಆರಂಭವಾಗಿದೆ. ಈ ವೇಳೆ ಪುರಾತನ ವಸ್ತುಗಳು ಸಿಗ ತೊಡಗಿವೆ. ಮನೆಯ ಪಾಯ ಅಗೆಯುವಾಗ ಶಿವಲಿಂಗಕ್ಕೆ‌ ಸಂಬಂಧಿಸಿದ ವಸ್ತುಗಳು ಸಿಕ್ಕಿವೆ.

ಇದೀಗ ಸುತ್ತಮುತ್ತಲಿನ ಪ್ರದೇಶದಲ್ಲೂ ಅಗೆದು ಹುಡುಕಾಟ ನಡೆಸಲು ಲಕ್ಕುಂಡಿ ಪ್ರಾಧಿಕಾರದ ಸದಸ್ಯರು ನಿರ್ಧಾರ ಮಾಡಿದ್ದಾರೆ. ಈಗ ಸಿಕ್ಕಿರುವ ವಸ್ತು ನೀರು ಹರಿಯುವ ವಸ್ತುವಿನ ರೀತಿಯಲ್ಲಿ ಇದೆ. ಯಾವುದೇ ರೀತಿಯಲ್ಲೂ ಆ ವಸ್ತುವಿಗೆ ಧಕ್ಕೆಯಾಗದಂತೆ ಅಗೆಯುವ ಕೆಲಸ ಮಾಡುತ್ತಿದ್ದಾರೆ. ಪುರಾತತ್ವ ಇಲಾಖೆಯ ತಜ್ಞರ ಜೊತೆಗೂ ಈ ಸಂಬಂಧ ಚರ್ಚೆ ನಡೆಸಲಾಗಿದೆ. ದೇವರ ಕೆಳಗೆ ಇರುವಂತ ಪೀಠ ಇದು ಎಂಬುದು ಪ್ರಾಥಮಿಕ ಮಾಹಿತಿಯನ್ನು ನೀಡಲಾಗಿದೆ ಎಂದು ಪ್ರಾಧಿಕಾರದ ಸದಸ್ಯ ಸಿದ್ದು ಪಾಟೀಲ್ ಅವರು ತಿಳಿಸಿದ್ದಾರೆ.

ಇದೇ ವೇಳೆ ಗ್ರಾಮಸ್ಥರು ಸರ್ಕಾರಕ್ಕೆ ಒಂದು ಮನವಿಯನ್ನು ಸಲ್ಲಿಸುತ್ತಿದ್ದಾರೆ. ಸಚಿವರು, ಶಾಸಕರು, ಗ್ರಾಮಸ್ಥರ ಸಭೆ ಕರೆಯಬೇಕು. ಇಡೀ ಗ್ರಾಮವನ್ನೇ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಎಲ್ಲಿಯೇ ಮನೆ ನಿರ್ಮಾಣ ಮಾಡಬೇಕು ಅಂದ್ರು ಅನುಮತಿ ಸಿಕ್ತಾ ಇಲ್ಲ, ಬ್ಯಾಂಕ್ ಗಳಲ್ಲಿ ಸಾಲ‌ ಸಿಕ್ತಾ ಇಲ್ಲ. ಇಡೀ ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ನಾವೂ ಬೆಂಬಲ ನೀಡ್ತೀವಿ. ಆದರೆ ಇಡೀ ಗ್ರಾಮವನ್ನೇ ಸ್ಥಳಾಂತರ ಮಾಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಲಕ್ಕುಂಡಿ ಗ್ರಾಮ ಚಿಕ್ಕದಲ್ಲ. ತೀರಾ ದೊಡ್ಡದಾದ ಗ್ರಾಮವಾಗಿದೆ. ಹೀಗಾಗಿ ಗ್ರಾಮ ಸ್ಥಳಾಂತರ ಅಷ್ಟು ಸುಲಭವಾ ಎಂಬ ಪ್ರಶ್ನೆಯೂ ಕಾಡುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now