ಈ ಚುನಾವಣೆ ಫಲಿತಾಂಶದ ಬಳಿಕ ಗ್ರಾಮೀಣ ಭಾಗದಲ್ಲೂ ಕಾಂಗ್ರೆಸ್ ಇರಲ್ಲ : ಬಿಎಸ್ವೈ

0 Min Read

ಶಿವಮೊಗ್ಗ: ಇಂದು ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರನ ಜೊತೆ ಹೋಗಿ ಶಿಕಾರಿಪುರದಲ್ಲಿ ಮತ ಚಲಾವಣೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಪರಿಷತ್ ಚುನಾವಣಾ ಫಲಿತಾಂಶ ಬಂದ ಬಳಿಕ ಗ್ರಾಮೀಣ ಭಾಗದಲ್ಲೂ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಗೆದ್ದೆ ಗೆಲ್ತೀವಿ ಮತ್ತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಲ್ಲೆಡೆ ಬಿಜೆಪಿ ಪರವಾದ ಅಲೆ ಇರೋದು ಸ್ಪಷ್ಟವಾಗುತ್ತಿದೆ. ನಾನು ಈಗ ಯಾರ ಟೀಕೆಗೂ ಪ್ರತಿಕ್ರಿಯೆ ನೀಡಲ್ಲ. ಚುನಾವಣಾ ಫಲಿತಾಂಶ ಬಂದ ಬಳಿಕ ಗೊತ್ತಾಗಲಿದೆ. ಯಾರ್ಯಾರು ಎಲ್ಲೆಲ್ಲಿ ಇದ್ದಾರೆ ಅಂತ ಗೊತ್ತಾಗಲಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *