Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಾಮುಂಡಿ ಬೆಟ್ಟಕ್ಕೆ ಬರುವವರಿಗೆ ವಸ್ತ್ರ ಸಂಹಿತೆ ಇಲ್ಲ : ಸಿದ್ದರಾಮಯ್ಯ

---Advertisement---

ಮೈಸೂರು: ಇಂದು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ದೇವಸ್ಥಾನದಲ್ಲಿ ಬರುವ ನಿವ್ವಳ ಆದಾಯದ ಬಗ್ಗೆ ತಿಳಿಸಿದರು.

ಪ್ರಾಧಿಕಾರದಲ್ಲಿ ಒಟ್ಟು 169.22 ಕೋಟಿ ¯ಭ್ಯವಿದ್ದು, ದೇವಾಲಯದ ಉಳಿತಾಯ ಖಾತೆಯಲ್ಲಿ 20.24 ಕೋಟಿ ರೂ.ಗಳು ಲಭ್ಯವಿದೆ. 2023-24 ರಲ್ಲಿ 49.64 ಕೋಟಿ ರೂ.ಗಳ ಆದಾಯ 28.18 ಕೋಟಿ ನಿವ್ವಳ ಆದಾಯ ಬಂದಿದೆ. ಜುಲೈ ಕೊನೆಯವರೆಗೆ 17.4 ಕೋಟಿ ಆದಾಯ ಬಂದಿದ್ದು, 6.97 ಕೋಟಿ ವೆಚ್ಚವಾಗಿದೆ. ಪ್ರತಿ ವರ್ಷ ಆದಾಯ ಹೆಚ್ಚಾಗುತ್ತಿದೆ. ಅಂದರೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿರುವ ದೇವಿಕೆರೆ, ನಂದಿ ಪ್ರತಿಮೆ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದೆ. ಶಾಸಕರು ಹಾಗೂ ಸಚಿವರು ವ್ಯಕ್ತ ಮಾಡಿರುವ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರಾಧಿಕಾರ ಕೆಲಸ ಮಾಡುತ್ತದೆ ಎಂದು ತಿಳಿಸಿದರು.

ಇದೆ ವೇಳೆ, ಬೆಟ್ಟಕ್ಕೆ ಬರುವ ಮೆಟ್ಟಿಲುಗಳನ್ನು ಅಭಿವೃದ್ಧಿಪಡಿಲಾಗುವುದು ಎಂದ ಮುಖ್ಯಮಂತ್ರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವವರಿಗೆ ಯಾವುದೇ ವಸ್ತ್ರ ಸಂಹಿತೆಯನ್ನು ಜಾರಿ ಮಾಡಿಲ್ಲ. ಎಲ್ಲಾ ಜಾತಿ , ಧರ್ಮದವರು ದೇವಸ್ಥಾನಕ್ಕೆ ಬರಬಹುದು ಎಂದರು.

ದೇವಾಲಯಗಳಲ್ಲಿ ಅಗತ್ಯವಿರುವೆಡೆ ಸಿಸಿಟಿವಿ ಅಳವಡಿಸಬೇಕೆಂದು ತೀರ್ಮಾನಿಸಿ, ಯೂನಿಯನ್ ಬ್ಯಾಂಕ್ ನವರು ಸಿಎಸ್ ಆರ್ ನಿಧಿಯಿಂದ ಸಿಸಿಟಿವಿಗಳನ್ನು ಅಳವಡಿಕೆಗೆ ಸಹಕಾರ ನೀಡಲಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ದೀಪದ ವ್ಯವಸ್ಥೆಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ಅಪರಾಧಗಳನ್ನು ನಿಗ್ರಹಿಸಲು ಒಂದು ಟಾಸ್ಕ್ ಫೋರ್ಸ್ ನ್ನು ರಚನೆ ಮಾಡಲಾಗುವುದು ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment