ತಿರುಪತಿಗೆ ನಂದಿನಿ ತುಪ್ಪ ಕಳುಹಿಸುವುದಕ್ಕೆ ಸಮಸ್ಯೆ ಇಲ್ಲ : ಸಿದ್ದರಾಮಯ್ಯ ಡಿಮ್ಯಾಂಡ್ ಏನು..?

ಬೆಂಗಳೂರು: ಕಳೆದ 20 ವರ್ಷಗಳಿಂದ ತಿರುಪತಿಗೆ ನಂದಿನಿ ತುಪ್ಪವನ್ನು ಕಳುಹಿಸಿ ಕೊಡಲಾಗುತ್ತಿತ್ತು. ಆದ್ರೆ ಆ ಟೆಂಡರ್ ಕ್ಯಾನ್ಸಲ್ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ವಿಚಾರವಾಗಿ ಮಾತನಾಡಿದ್ದಾರೆ. ನಾವೂ ಕೇಳುವ ದರವನ್ನು ನೀಡುವುದಾದರೆ ತುಪ್ಪ ಪೂರೈಸಲು ಸಿದ್ಧ ಎಂದಿದ್ದಾರೆ.

ತಿರುಪತಿಗೆ 6 ತಿಂಗಳಿಗೆ 14 ಲಕ್ಷ ಕೆಜಿಯಷ್ಟು ತುಪ್ಪವನ್ನು ನೀಡಲಾಗುತ್ತಿತ್ತು. ಅದುವರೆ ರಿಯಾಯಿತಿ ದರದಲ್ಲಿ. ಈಗ ಹಾಲಿನ ದರ ಹೆಚ್ಚಳವಾಗಿದೆ. ಮೊದಲಿನ ಹಾಗೇ ರಿಯಾಯಿತಿ ದರದಲ್ಲಿ ತುಪ್ಪ ಪೂರೈಕೆ ಕಷ್ಟ ಎಂದೇ ಸರ್ಕಾರ ಅಭಿಪ್ರಾಯಪಟ್ಟಿದೆ.

ಇನ್ನು ಇದೇ ವಿಚಾರವಾಗಿ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ ಮಾಡಿದ್ದರು. ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ, ಭಕ್ತಿಯ ವಿಚಾರದಲ್ಲಿ ಕಾಂಗ್ರೆಸ್ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿಗೆ ಲಡ್ಡು ಪೂರೈಕೆ ಸ್ಥಗಿತಗೊಂಡಿದೆ ಎಂದಿದ್ದರು. ಅದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪದ ಪೂರೈಕೆ ಸ್ಥಗಿತಗೊಂಡಿರುವುದು ನಿನ್ನೆ, ಮೊನ್ನೆಯದಲ್ಲ. ಬಿಜೆಪಿ ಸರ್ಕಾರ ಇದ್ದಾಗಲೇ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು ಎಂದು ತಿರುಗೇಟು ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *