ಬೆಂಗಳೂರು: ಕಳೆದ 20 ವರ್ಷಗಳಿಂದ ತಿರುಪತಿಗೆ ನಂದಿನಿ ತುಪ್ಪವನ್ನು ಕಳುಹಿಸಿ ಕೊಡಲಾಗುತ್ತಿತ್ತು. ಆದ್ರೆ ಆ ಟೆಂಡರ್ ಕ್ಯಾನ್ಸಲ್ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ವಿಚಾರವಾಗಿ ಮಾತನಾಡಿದ್ದಾರೆ. ನಾವೂ ಕೇಳುವ ದರವನ್ನು ನೀಡುವುದಾದರೆ ತುಪ್ಪ ಪೂರೈಸಲು ಸಿದ್ಧ ಎಂದಿದ್ದಾರೆ.
ತಿರುಪತಿಗೆ 6 ತಿಂಗಳಿಗೆ 14 ಲಕ್ಷ ಕೆಜಿಯಷ್ಟು ತುಪ್ಪವನ್ನು ನೀಡಲಾಗುತ್ತಿತ್ತು. ಅದುವರೆ ರಿಯಾಯಿತಿ ದರದಲ್ಲಿ. ಈಗ ಹಾಲಿನ ದರ ಹೆಚ್ಚಳವಾಗಿದೆ. ಮೊದಲಿನ ಹಾಗೇ ರಿಯಾಯಿತಿ ದರದಲ್ಲಿ ತುಪ್ಪ ಪೂರೈಕೆ ಕಷ್ಟ ಎಂದೇ ಸರ್ಕಾರ ಅಭಿಪ್ರಾಯಪಟ್ಟಿದೆ.
ಇನ್ನು ಇದೇ ವಿಚಾರವಾಗಿ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ ಮಾಡಿದ್ದರು. ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ, ಭಕ್ತಿಯ ವಿಚಾರದಲ್ಲಿ ಕಾಂಗ್ರೆಸ್ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿಗೆ ಲಡ್ಡು ಪೂರೈಕೆ ಸ್ಥಗಿತಗೊಂಡಿದೆ ಎಂದಿದ್ದರು. ಅದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪದ ಪೂರೈಕೆ ಸ್ಥಗಿತಗೊಂಡಿರುವುದು ನಿನ್ನೆ, ಮೊನ್ನೆಯದಲ್ಲ. ಬಿಜೆಪಿ ಸರ್ಕಾರ ಇದ್ದಾಗಲೇ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು ಎಂದು ತಿರುಗೇಟು ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















